ಹುಬ್ಬಳ್ಳಿಯ ರೈಲ್ವೆ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ಭಾರತದತ್ತ ನೋಡುತ್ತಿವೆ ಜಾಗತಿಕ ಉದ್ಯಮ, ರನ್‌ವೇ ರೆಡಿ ನೀವು ಟೇಕಾಫ್‌ ಆಗುವುದೊಂದೇ ಬಾಕಿ: ಯುವಕರಿಗೆ ಪ್ರಧಾನಿ

"ಹಲವು ಜಾಗತಿಕ ಉದ್ಯಮಗಳು ಭಾರತದತ್ತ ನೋಡುತ್ತಿವೆ, ಕಳೆದ 8 ವರ್ಷಗಳಲ್ಲಿ ಯುವಕರಿಗಾಗಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ಸಾಧನೆ ಮಾಡಲು ಯುವ ಸಮುದಾಯಕ್ಕೆ ಇದು ಸಕಾಲ.

ಹುಬ್ಬಳ್ಳಿ: "ಹಲವು ಜಾಗತಿಕ ಉದ್ಯಮಗಳು ಭಾರತದತ್ತ ನೋಡುತ್ತಿವೆ, ಕಳೆದ 8 ವರ್ಷಗಳಲ್ಲಿ ಯುವಕರಿಗಾಗಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ಸಾಧನೆ ಮಾಡಲು ಯುವ ಸಮುದಾಯಕ್ಕೆ ಇದು ಸಕಾಲ. ರನ್‌ವೇ ರೆಡಿ ಇದೆ, ನೀವು ಟೇಕಾಫ್‌ ಆಗುವುದೊಂದೇ ಬಾಕಿ" ಎಂದು ಪ್ರಧಾನಿ ನರೇಂದ್ರ ಮೋದಿ ಯುವಜನತೆಗೆ ಕರೆ ನೀಡಿದ್ದಾರೆ. 

ಹುಬ್ಬಳ್ಳಿಯ ರೈಲ್ವೆ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,  ಭಾರತ ಒಂದು ಯುವ ದೇಶ. ಯುವಕರ ದೊಡ್ಡ ಪಡೆ, ಯುವ ಶಕ್ತಿ ನಮ್ಮ ದೇಶದಲ್ಲಿದೆ. ದೇಶದ ಬೆಳವಣಿಗೆಗೆ ಯುವ ಶಕ್ತಿ ಅಡಿಪಾಯವಾಗಲಿದೆ ಎಂದು ಹೇಳಿದರು.

ಯುವಕರಿಗಾಗಿ ಭವ್ಯ ಭವಿಷ್ಯವನ್ನು ನಾವು ರೂಪಿಸಿದ್ದೇವೆ. ಯುವ ಶಕ್ತಿಯಿಂದಾಗಿ ಎಲ್ಲಾ ಕ್ಷೇತ್ರಗಳಲ್ಲಿ ಭಾರತ ಯಶಸ್ವಿಯಾಗಿ ಸಾಗುತ್ತಿದೆ. ಭಾರತ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಭಾರತದ ಸ್ಟಾರ್ಟ್‌ಅಪ್‌ಗಳಿಗೆ ಹಣ ಹರಿದು ಬರುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಯುವಕರಿಗೆ ಸ್ವಾಮಿ ವಿವೇಕಾನಂದರವರು ಪ್ರೇರಣೆ ಆಗಿದ್ದಾರೆ. ಮೈಸೂರು ಮಹಾರಾಜರು ಚಿಕಾಗೋ ಯಾತ್ರೆಗೆ ಸಹಾಯ ಮಾಡಿದ್ದರು. ಸ್ವಾಮಿ ವಿವೇಕಾನಂದರು ಯುವಕರೇ ದೇಶದ ಭವಿಷ್ಯ ಎಂದಿದ್ದರು. ಚಿಕ್ಕ ವಯಸ್ಸಿನಲ್ಲೇ ಸ್ವಾಮಿ ವಿವೇಕಾನಂದರು ಸಾಧನೆ ಮಾಡಿದ್ದರು. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ವದ್ದು. ದೇಶವನ್ನು ಮುನ್ನಡೆಸುವುದು ಯುವಕರ ಕರ್ತವ್ಯ. ದೇಶದ ಭವಿಷ್ಯ ಯುವಕರ ಮೇಲೆ ನಿಂತಿದೆ ಎಂದು ಮೋದಿ ಹೇಳಿದ್ದಾರೆ.

ಮಹಿಳಾ ಶಕ್ತಿ ರಾಷ್ಟ್ರಶಕ್ತಿಯನ್ನು ಜಾಗೃತವಾಗಿ ಇಟ್ಟಿದೆ ಎಂದೂ ಮೋದಿ ಹೇಳಿದ್ದು ಭಾರತದ ಮಹಿಳೆಯರು ಫೈಟರ್ ಜೆಟ್ ಹಾರಿಸುತ್ತಿದ್ದಾರೆ. ವಿಜ್ಞಾನ, ತಂತ್ರಜ್ಞಾನದಲ್ಲಿ ನಮ್ಮ ಹೆಣ್ಣುಮಕ್ಕಳು ಉನ್ನತ ಸಾಧನೆ ಮಾಡಿದ್ದಾರೆ. 21ನೇಯ ಶತಮಾನವನ್ನು ಭಾರತದ ಶತಮಾನ ಮಾಡಬೇಕಿದೆ ಎಂದು ಮೋದಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT