ವಿಧಾನ ಸೌಧ ಎದುರು ಬಸವಣ್ಣ, ಕೆಂಪೇಗೌಡ ಪುತ್ಥಳಿ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಗಣ್ಯರು 
ರಾಜ್ಯ

ವಿಧಾನ ಸೌಧ ಮುಂದೆ ಕೆಂಪೇಗೌಡ, ಬಸವೇಶ್ವರ ಪುತ್ಥಳಿಗೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ

ವಿಧಾನ ಸೌಧ ಎದುರು ಕೆಂಪೇಗೌಡ, ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಇಂದು ಶುಕ್ರವಾರ ಭೂಮಿ ಪೂಜೆ ನೆರವೇರಿಸಲಾಯಿತು. ಸಿಎಂ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದ್ದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿರ್ಮಲಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ನಂಜಾವಧೂತ ಸ್ವಾಮಿಗಳು ಭಾಗವಹಿಸಿದ್ದರು.

ಬೆಂಗಳೂರು: ವಿಧಾನ ಸೌಧ ಎದುರು ಕೆಂಪೇಗೌಡ, ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಇಂದು ಶುಕ್ರವಾರ ಭೂಮಿ ಪೂಜೆ ನೆರವೇರಿಸಲಾಯಿತು. ಸಿಎಂ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದ್ದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿರ್ಮಲಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ನಂಜಾವಧೂತ ಸ್ವಾಮಿಗಳು ಭಾಗವಹಿಸಿದ್ದರು.

ವಿಧಾನಸೌಧದ ಹೈಕೋರ್ಟ್ ಗೇಟ್ ಕಡೆ ಪ್ರತಿಮೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಾಗ್ನಾ ಕಾರ್ಟ ಮೊದಲು ಜನರ ಸಂಸತ್ತನ್ನು ಮೊದಲ ಬಾರಿಗೆ ಕಲ್ಪಿಸಿಕೊಂಡವರು ಬಸವಣ್ಣ. ಅವರ ಮೌಲ್ಯಗಳು ಕರ್ನಾಟಕ ಜನತೆಯ ಜೀವನವನ್ನು ಪುಷ್ಟೀಕರಿಸಿದೆ. ಅದೇ ರೀತಿ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರು ಮಾದರಿ ಆಡಳಿತವನ್ನು ತಂದರು. ನವ ಕರ್ನಾಟಕ ಮೌಲ್ಯಾಧಾರಿತವಾಗಿ ಕಟ್ಟಬೇಕಿದೆ ಎಂದರು. 

ವಿಧಾನಸಬೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾನೂನು ಸಚಿವ ಮಾಧುಸ್ವಾಮಿ, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊದಲಾದವರು ಭಾಗಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT