ಸಂಗ್ರಹ ಚಿತ್ರ 
ರಾಜ್ಯ

ಶೀಘ್ರದಲ್ಲೇ ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ

ಡಾ.ವಿಷ್ಣುವರ್ಧನ್ ಅವರ ಹುಟ್ಟೂರಾದ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂಬ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳ ಬಹುದಿನಗಳ ಬೇಡಿಕೆ ಸದ್ಯದಲ್ಲೇ ನನಸಾಗಲಿದೆ.

ಮೈಸೂರು: ಡಾ.ವಿಷ್ಣುವರ್ಧನ್ ಅವರ ಹುಟ್ಟೂರಾದ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂಬ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳ ಬಹುದಿನಗಳ ಬೇಡಿಕೆ ಸದ್ಯದಲ್ಲೇ ನನಸಾಗಲಿದೆ.

ಜನವರಿ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಷ್ಣುವರ್ಧನ್ ಅವರ ಸ್ಮಾರಕವನ್ನು ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಭರದ ಸಿದ್ಧತೆ ನಡೆದಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯ ಬಗ್ಗೆ ನಟ ಮತ್ತು ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಅವರು ಮಾತನಾಡಿದ್ದು, ಖಚಿತಪಡಿಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

"ಮೈಸೂರಿನಲ್ಲಿ ಪೂರ್ಣಗೊಂಡಿರುವ ಡಾ. ವಿಷ್ಣುವರ್ಧನ್​ ಅವರ ಸ್ಮಾರಕದ ಉದ್ಘಾಟನೆಗೆ ಬರಲು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ತಾವೆಲ್ಲರೂ ಇಷ್ಟು ವರ್ಷ ಕಾದಿದ್ದೀರಿ. ಇಂದು ಈ ಸಂತೋಷದ ಸುದ್ದಿಯನ್ನು ಎಲ್ಲರೂ ಕೇಳುತ್ತಿದ್ದೀರಿ. ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿಷ್ಣುವರ್ಧನ್​ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ.." ಎಂದು ಅನಿರುದ್ಧ ವಿಡಿಯೋ ಪೋಸ್ಟ್‌ ಮಾಡಿದ್ದಾರೆ.

ಮೈಸೂರು ನಗರದ ಹೊರವಲಯದ ಎಚ್‌ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ ಐದು ಎಕರೆ ಪ್ರದೇಶದಲ್ಲಿ ರೂ.11 ಕೋಟಿ ವೆಚ್ಚದಲ್ಲಿ ಸ್ಮಾರಕವನ್ನು ನಿರ್ಮೀಸಲಾಗಿದ್ದು, ಜನವರಿ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು ಎಂದು ಹೇಳಲಾಗುತ್ತಿದೆ.

ನಟನ ಚಲನಚಿತ್ರ ಪ್ರಯಾಣದ ಗ್ಯಾಲರಿ, ವಿಷ್ಣು ಅವರ ಅಪರೂಪದ ಫೋಟೋಗಳು, ವಿಷ್ಣು ಬಳಸುತ್ತಿದ್ದ ವಸ್ತುಗಳು, ಬಟ್ಟೆ ಇಲ್ಲಿ ಕಾಣಿಸಲಿವೆ. ಸಿನಿಮಾದಲ್ಲಿನ ಪ್ರಶಸ್ತಿಗಳೂ ಸ್ಮಾರಕದ ಮ್ಯೂಸಿಯಂನಲ್ಲಿರಲಿವೆ. ವಿಶೇಷವಾದ ವಿಷ್ಣು ಪುತ್ಥಳಿಯನ್ನೂ ನಿರ್ಮಿಸಲಾಗಿದೆ. ಸ್ಮಾರಕವು ಪ್ರವಾಸಿ ಆಕರ್ಷಣೆಯಾಗುವ ನಿರೀಕ್ಷೆಯಿದೆ.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ನಟರ ಸ್ಮಾರಕಕ್ಕೆ ಸೆಪ್ಟೆಂಬರ್ 15, 2020 ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ಸ್ಮಾರಕದ ಕಾಮಗಾರಿ ಪೂರ್ಣಗೊಳ್ಳಲು ಸುಮಾರು 25 ತಿಂಗಳುಗಳ ಬೇಕಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT