ಹಂಪಿ ಬಳಿ ರಕ್ಷಿಸಲ್ಪಟ್ಟ ಯುರೇಷಿಯನ್ ಗ್ರಿಫನ್ ವಲ್ಚರ್(ಫೋಟೋ ಕೃಪೆ-ಶಿವಶಂಕರ ಬಣಗಾರ್ 
ರಾಜ್ಯ

ಹಂಪಿ ಬಳಿ ಕಳೆದ ತಿಂಗಳು ರಕ್ಷಿಸಲ್ಪಟ್ಟಿದ್ದ ಯುರೇಷಿಯನ್ ಗ್ರಿಫನ್ ವಲ್ಚರ್ ಮರಳಿ ಗೂಡಿಗೆ

ಕಳೆದ ತಿಂಗಳು ವಿಜಯನಗರ ಜಿಲ್ಲೆಯ ವಿಶ್ವವಿಖ್ಯಾತ ಹಂಪಿ ಬಳಿಯ ರಾಣಿಪೇಟೆಯಲ್ಲಿ ಶಾಲಾ ಮಕ್ಕಳ ಕೈಗೆ ಅಪರೂಪದ ಯುರೇಷಿಯನ್ ಗ್ರಿಫನ್ ರಣಹದ್ದುಗಳು ಸಿಕ್ಕಿದ್ದವು.

ಹಂಪಿ: ಕಳೆದ ತಿಂಗಳು ವಿಜಯನಗರ ಜಿಲ್ಲೆಯ ವಿಶ್ವವಿಖ್ಯಾತ ಹಂಪಿ ಬಳಿಯ ರಾಣಿಪೇಟೆಯಲ್ಲಿ ಶಾಲಾ ಮಕ್ಕಳ ಕೈಗೆ ಅಪರೂಪದ ಯುರೇಷಿಯನ್ ಗ್ರಿಫನ್ ರಣಹದ್ದುಗಳು ಸಿಕ್ಕಿದ್ದವು.

ಅಸ್ವಸ್ಥ ಸ್ಥಿತಿಯಲ್ಲಿ ಅವರು ಶಾಲಾ ಮಕ್ಕಳ ಕಣ್ಣಿಗೆ ಬಿದ್ದಿದ್ದವು. ನಂತರ ಹವ್ಯಾಸಿ ಛಾಯಾಗ್ರಾಹಕ ಶಿವಶಂಕರ ಬಣಗಾರ್ ಅವರು ಮಕ್ಕಳ ಕೈಯಿಂದ ರಣಹದ್ದುಗಳನ್ನು ರಕ್ಷಿಸಿ ತಾಲ್ಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಪ್ರಾಣಿ ಸಂಗ್ರಹಾಲಯಕ್ಕೆ ನೀಡಿದ್ದರು. 

ಮೃಗಾಲಯದ ತಜ್ಞ ಪಶುವೈದ್ಯೆ ಡಾ ವಾಣಿ ಹಾಗೂ ಸಿಬ್ಬಂದಿಗಳ ತಂಡ ಅಸ್ವಸ್ಥ ಸ್ಥಿತಿಯಲ್ಲಿದ್ದ ಪಕ್ಷಿಗೆ ಸೂಕ್ತ ಚಿಕಿತ್ಸೆ ನೀಡಿ ಇದೀಗ ಗುಣಪಡಿಸಿ ಮತ್ತೆ ಪಂಜರದಿಂದ ಮುಕ್ತಗೊಳಿಸಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಇಂಗಳಿಗಿ ಗ್ರಾಮದ ಬೆಟ್ಟದ ತುದಿಯಲ್ಲಿ ಹಾರಿ ಬಿಟ್ಟಿದ್ದಾರೆ. 

ವನ್ಯಜೀವಿ ಸಂಶೋಧಕ ಡಾ ಸಮದ್ ಕೊಟ್ಟೂರು ಅವರು ಈ ಪಕ್ಷಿಯ ಗುರುತು ಪತ್ತೆಹಚ್ಚಿ ಇದು ಒಂದು ವರ್ಷ ವಯೋಮಾನದ ಯುರೋಪಿಯನ್ ಗ್ರಿಫನ್ ರಣಹದ್ದು ಎಂದು ಗುರುತಿಸಿದ್ದಾರೆ.

ರಣಹದ್ದಿನ ಕಾಲಿಗೆ ವಿಶೇಷ ಗುರುತಿಗೆ ನೀಲಿ ಬಣ್ಣದ ಉಂಗುರವನ್ನು ಹಾಕಲಾಗಿದೆ. ಉಂಗುರದ ಮೇಲೆ ಸಿಯು ಎಂದು ಮುದ್ರಿಸಲಾಗಿದೆ. ಹಂಪಿಯ ಹತ್ತಿರ ಸಿಕ್ಕಿರುವುದು ಎಂದು ಮುಂದೆ ಇದನ್ನು ವಿಶೇಷವಾಗಿ ಸುಲಭವಾಗಿ ಗುರುತು ಹಿಡಿಯಬಹುದಾಗಿದೆ. 

ಯುರೇಷಿಯನ್ ಗ್ರಿಫನ್ ರಣಹದ್ದುಗಳು ಸಾಮಾನ್ಯವಾಗಿ ಭಾರತದ ಉತ್ತರ ಭಾಗ, ವಾಯುವ್ಯ ಪ್ರದೇಶದಲ್ಲಿ ಕಂಡುಬರುತ್ತವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT