ಸಂಗ್ರಹ ಚಿತ್ರ 
ರಾಜ್ಯ

ಮೆಟ್ರೋ ಪಿಲ್ಲರ್ ಕುಸಿತ ದುರಂತ ಬಳಿಕ ಎಚ್ಚೆತ್ತ ಬಿಎಂಆರ್'ಸಿಎಲ್: ನಿರ್ಮಾಣ ಸ್ಥಳಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಲು ಸಿದ್ಧತೆ!

ಎಚ್‌ಬಿಆರ್‌ ಲೇಔಟ್‌ನಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಮತ್ತು ಮಗು ದುರ್ಮರಣವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್'ಸಿಎಲ್ ಅಧಿಕಾರಿಗಳು ಇದೀಗ ನಿರ್ಮಾಣ ಸ್ಥಳಗಳಿಗೆ ಮಾರ್ಗಸೂಚಿ ಹೊರಡಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಎಚ್‌ಬಿಆರ್‌ ಲೇಔಟ್‌ನಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಮತ್ತು ಮಗು ದುರ್ಮರಣವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್'ಸಿಎಲ್ ಅಧಿಕಾರಿಗಳು ಇದೀಗ ನಿರ್ಮಾಣ ಸ್ಥಳಗಳಿಗೆ ಮಾರ್ಗಸೂಚಿ ಹೊರಡಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು, ಎಚ್‌ಬಿಆರ್ ಲೇಔಟ್‌ನ ಹೊರ ವರ್ತುಲ ರಸ್ತೆಯಲ್ಲಿ ಪಿಲ್ಲರ್‌ಗೆ ತಯಾರಾಗಿದ್ದ ಕಬ್ಬಿಣದ ಸರಳುಗಳ ಎತ್ತರವನ್ನು ಕಡಿಮೆ ಮಾಡಲಾಗಿದೆ. ಈ ರಚನೆಗಳು 10 ಮೀ ಮೀರಬಾರದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆಲ್ಲದೆ, ನಿರ್ಮಾಣ ಸ್ಥಳಗಳಿಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿತ್ತಿರುವುದಾಗಿ ತಿಳಿಸಿದ್ದಾರೆ.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸರು ಸ್ಥಳದಲ್ಲಿರುವ ಬಿಎಂಆರ್‌ಸಿಎಲ್ ಕಚೇರಿಗಳಿಗೆ ಭೇಟಿ ನೀಡಿ ಎಂಜಿನಿಯರ್‌ಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಅಪಘಾತದ ಸ್ಥಳದಲ್ಲಿ ತಾಂತ್ರಿಕ ತನಿಖೆಗಾಗಿ ಪೊಲೀಸರು ಸ್ವತಂತ್ರ ಸಂಸ್ಥೆಗಳ ಸಹಾಯವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT