ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗದಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ

ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಖಚಿತ ಮಾಹಿತಿ ಮೇರೆಗೆ ಶುಕ್ರವಾರ ಬೆಳಗ್ಗೆ 5.30ಕ್ಕೆ ತುಂಗಾನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದು, ಅಷ್ಟರಲ್ಲಾಗಲೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ.

ಸೂಳೆಬೈಲಿನ ಅಜೀಜ್ ಎಂಬುವರ ಮನೆ ಹಿಂಭಾಗದ ಶೆಡ್​ನಲ್ಲಿ ಮಾಂಸಕ್ಕಾಗಿ ಗೋವುಗಳನ್ನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಅಕ್ರಮ ಕಸಾಯಿ ಖಾನೆಯಲ್ಲಿದ್ದ ಉಳಿದ 10 ಹಸುಗಳನ್ನ ಪೊಲೀಸರು ರಕ್ಷಣೆ ಮಾಡಿದ್ದು, ಗೋಶಾಲೆಗೆ ಸ್ಥಳಾಂತರ ಮಾಡಲಾಗಿದೆ.

ಅಧಿಕಾರಿಗಳ ದಾಳಿ ಬೆನ್ನಲ್ಲೇ ಆರೋಪಿಗಳು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

'ಬೆಂಗಳೂರು ಟೆಕ್ ಸಮ್ಮಿಟ್ 2025'ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ವಿಡಿಯೋದಲ್ಲಿ ಉಗ್ರ ಹೇಳಿದ್ದೇನು?

ನೌಕರಿ, ಹಣಕಾಸು ದಾಂಪತ್ಯ - ಹೀಗಿದೆ ಈ ವಾರದ ಭವಿಷ್ಯ

SCROLL FOR NEXT