ಜಗ್ಗಿ ವಾಸುದೇವ್ 
ರಾಜ್ಯ

ಯಥಾಸ್ಥಿತಿ ಜನವರಿ 15ರ ಇಶಾ ಯೋಗ ಕೇಂದ್ರದ ಕಾರ್ಯಕ್ರಮದ ಮೇಲೆ ಪರಿಣಾಮ ಬೀರಲ್ಲ: ಹೈಕೋರ್ಟ್ ಸ್ಪಷ್ಟನೆ

ಚಿಕ್ಕಬಳ್ಳಾಪುರದಲ್ಲಿ ಆದಿ ಯೋಗಿ ಪ್ರತಿಮೆ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜನವರಿ 11 ರಂದು ನೀಡಿದ್ದ ಮಧ್ಯಂತರ ಆದೇಶವು ಜನವರಿ 15 ರಂದು...

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಆದಿ ಯೋಗಿ ಪ್ರತಿಮೆ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜನವರಿ 11 ರಂದು ನೀಡಿದ್ದ ಮಧ್ಯಂತರ ಆದೇಶವು ಜನವರಿ 15 ರಂದು ನಿಗದಿಯಾಗಿರುವ ಕಾರ್ಯಕ್ರಮಕ್ಕೆ ಅಡ್ಡಿಯಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ.

ಇಶಾ ಯೋಗ ಕೇಂದ್ರ ಜನವರಿ 15 ರಂದು ನಂದಿ ಬೆಟ್ಟದ ಕೇಂದ್ರದಲ್ಲಿ ಆದಿ ಯೋಗಿ ಪ್ರತಿಮೆ ಅನಾವರಣಗೊಳಿಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಕರ್ ಭಾಗವಹಿಸಲಿದ್ದಾರೆ.

ಉಪರಾಷ್ಟ್ರಪತಿಗಳು ಭಾಗವಹಿಸುವ ನಿಗದಿತ ಕಾರ್ಯಕ್ರಮಕ್ಕೆ ಅಗತ್ಯವಿರುವ ವ್ಯವಸ್ಥೆಗಳನ್ನು ಹೊರತುಪಡಿಸಿ ಇತರೆ ಯಾವುದೇ ಆಪಾದಿತ ಅರಣ್ಯನಾಶ ಅಥವಾ ನಿರ್ಮಾಣ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಇಶಾ ಯೋಗ ಕೇಂದ್ರ ಭರವಸೆ ನೀಡಿದೆ.

ಯಥಾಸ್ಥಿತಿ ಆದೇಶ ತೆರವುಗೊಳಿಸುವಂತೆ ಕೋರಿ ಇಶಾ ಯೋಗ ಕೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಇಶಾ ಯೋಗ ಕೇಂದ್ರದಲ್ಲಿ 112 ಅಡಿಗಳ ಆದಿಯೋಗಿ ಮೂರ್ತಿ ಉದ್ಘಾಟನೆಗೆ ಸನ್ನದ್ದಾಗಿದೆ. ಉಪರಾಷ್ಟ್ರಪತಿ ಜಗದೀಪ್ ಧಂಕರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ. ಸುಧಾಕರ್ ಸೇರಿದಂತೆ ಗಣ್ಯಾತಿಗಣ್ಯರು ಆಶ್ರಮಕ್ಕೆ ಆಗಮಿಸಿ ಜನವರಿ 15ರಂದು ಸಂಜೆ ಆದಿಯೋಗಿ ಮೂರ್ತಿ ಉದ್ಘಾಟನೆ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT