ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಶುಲ್ಕ ಪಾವತಿಸಬೇಕು!

ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು (ಯುಡಿಎಫ್) ಪಾವತಿಸಬೇಕಾಗುತ್ತದೆ.

ಮಂಗಳೂರು: ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು (ಯುಡಿಎಫ್) ಪಾವತಿಸಬೇಕಾಗುತ್ತದೆ.

ಸದ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುಡಿಎಫ್‌ ಅನ್ನು ನಿರ್ಗಮನ ಪ್ರಯಾಣಿಕರು ಮಾತ್ರ ಪಾವತಿಸುತ್ತಿದ್ದಾರೆ. ಆದರೆ, ಫೆಬ್ರವರಿಯಿಂದ ಆಗಮನ ಪ್ರಯಾಣಿಕರು ಕೂಡ ಈ ಶುಲ್ಕ ಪಾವತಿಸಬೇಕಿದೆ.

ಮೊದಲ ಬಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಅಭಿವೃದ್ಧಿ ಶುಲ್ಕವನ್ನು ವಿಧಿಸಲು ಮತ್ತು ನಿರ್ಗಮಿಸುವ ಪ್ರಯಾಣಿಕರ ಮೇಲೆ ಅಭಿವೃದ್ಧಿ ಶುಲ್ಕವನ್ನು ಹೆಚ್ಚಳ ಮಾಡಲು ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಮಂಗಳೂರು ವಿಮಾನ ನಿಲ್ದಾಣಕ್ಕೆ ಅನುಮತಿ ನೀಡಿದೆ.

ಎಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು. ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂತರಾಷ್ಟ್ರೀಯ ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ ಈ ಶುಲ್ಕ ಎಪ್ರಿಲ್‌ನಿಂದ 1,105 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಎಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು, ಮುಂದಿನ ವರ್ಷ ಮಾರ್ಚ್‌ ಬಳಿ ಕ 240 ಪಾವತಿಸಬೇಕಾಗಿದೆ.

ಕಳೆದ 12 ವರ್ಷದಿಂದ ಬಳಕೆದಾರರ ಶುಲ್ಕವನ್ನು ಏರಿಕೆ ಮಾಡಿರಲಿಲ್ಲ. ಈಗ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮೇಲ್ದರ್ಜೆಗೇರಿಸುವುದು, ರನ್‌ವೇ ವಿಸ್ತರಣೆ ಸಹಿತ ವಿವಿಧ ಅಭಿವೃದ್ಧಿ ನಡೆಸುವ ಕಾರಣದಿಂದ ಶುಲ್ಕ ಏರಿಕೆಗೆ ನಿರ್ಧರಿಸಲಾಗಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.

ಈ ಮಧ್ಯೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಈಗಿರುವ ದರವು ಫೆಬ್ರವರಿ ಹಾಗೂ ಮಾರ್ಚ್‌ಗೆ ಮಾತ್ರ ಅನ್ವಯವಾಗುವಂತೆ 80 ರೂ. ಇಳಿಕೆಯಾಗಲಿದ್ದು, ಎಪ್ರಿಲ್‌ನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT