ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಶುಲ್ಕ ಪಾವತಿಸಬೇಕು!

ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು (ಯುಡಿಎಫ್) ಪಾವತಿಸಬೇಕಾಗುತ್ತದೆ.

ಮಂಗಳೂರು: ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು (ಯುಡಿಎಫ್) ಪಾವತಿಸಬೇಕಾಗುತ್ತದೆ.

ಸದ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುಡಿಎಫ್‌ ಅನ್ನು ನಿರ್ಗಮನ ಪ್ರಯಾಣಿಕರು ಮಾತ್ರ ಪಾವತಿಸುತ್ತಿದ್ದಾರೆ. ಆದರೆ, ಫೆಬ್ರವರಿಯಿಂದ ಆಗಮನ ಪ್ರಯಾಣಿಕರು ಕೂಡ ಈ ಶುಲ್ಕ ಪಾವತಿಸಬೇಕಿದೆ.

ಮೊದಲ ಬಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಅಭಿವೃದ್ಧಿ ಶುಲ್ಕವನ್ನು ವಿಧಿಸಲು ಮತ್ತು ನಿರ್ಗಮಿಸುವ ಪ್ರಯಾಣಿಕರ ಮೇಲೆ ಅಭಿವೃದ್ಧಿ ಶುಲ್ಕವನ್ನು ಹೆಚ್ಚಳ ಮಾಡಲು ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಮಂಗಳೂರು ವಿಮಾನ ನಿಲ್ದಾಣಕ್ಕೆ ಅನುಮತಿ ನೀಡಿದೆ.

ಎಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು. ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂತರಾಷ್ಟ್ರೀಯ ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ ಈ ಶುಲ್ಕ ಎಪ್ರಿಲ್‌ನಿಂದ 1,105 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಎಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು, ಮುಂದಿನ ವರ್ಷ ಮಾರ್ಚ್‌ ಬಳಿ ಕ 240 ಪಾವತಿಸಬೇಕಾಗಿದೆ.

ಕಳೆದ 12 ವರ್ಷದಿಂದ ಬಳಕೆದಾರರ ಶುಲ್ಕವನ್ನು ಏರಿಕೆ ಮಾಡಿರಲಿಲ್ಲ. ಈಗ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮೇಲ್ದರ್ಜೆಗೇರಿಸುವುದು, ರನ್‌ವೇ ವಿಸ್ತರಣೆ ಸಹಿತ ವಿವಿಧ ಅಭಿವೃದ್ಧಿ ನಡೆಸುವ ಕಾರಣದಿಂದ ಶುಲ್ಕ ಏರಿಕೆಗೆ ನಿರ್ಧರಿಸಲಾಗಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.

ಈ ಮಧ್ಯೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಈಗಿರುವ ದರವು ಫೆಬ್ರವರಿ ಹಾಗೂ ಮಾರ್ಚ್‌ಗೆ ಮಾತ್ರ ಅನ್ವಯವಾಗುವಂತೆ 80 ರೂ. ಇಳಿಕೆಯಾಗಲಿದ್ದು, ಎಪ್ರಿಲ್‌ನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT