ಆಟದ ಮೈದಾನ ಅಭಿವೃದ್ಧಿಗೆ ಗುರುತಿಸಲಾಗಿರುವ ಭೂಮಿ. 
ರಾಜ್ಯ

ಬೆಳಗಾವಿ: ಆಟದ ಮೈದಾನ ಅಭಿವೃದ್ಧಿಗೆ 44 ಎಕರೆ ಭೂಮಿಗೆ ಜಿಲ್ಲಾಧಿಕಾರಿ ಆದೇಶ: ಗ್ರಾಮಸ್ಥರು ವಿರೋಧ

ಬೆಳಗಾವಿಯ ಯಳ್ಳೂರು ಗ್ರಾಮ ಮತ್ತೆ ಸುದ್ದಿಯಲ್ಲಿದೆ. ಕ್ರೀಡಾ ಮೈದಾನದ ಅಭಿವೃದ್ಧಿಗಾಗಿ 44 ಎಕರೆ ಭೂಮಿಯನ್ನು ಜಿಲ್ಲಾ ಪಂಚಾಯತ್'ಗೆ ನೀಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಈ ಆದೇಶಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಬೆಳಗಾವಿ: ಬೆಳಗಾವಿಯ ಯಳ್ಳೂರು ಗ್ರಾಮ ಮತ್ತೆ ಸುದ್ದಿಯಲ್ಲಿದೆ. ಕ್ರೀಡಾ ಮೈದಾನದ ಅಭಿವೃದ್ಧಿಗಾಗಿ 44 ಎಕರೆ ಭೂಮಿಯನ್ನು ಜಿಲ್ಲಾ ಪಂಚಾಯತ್'ಗೆ ನೀಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಈ ಆದೇಶಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಆಟದ ಮೈದಾನ ಅಭಿವೃದ್ಧಿಗೆ ಆದೇಶ ಹೊರಡಿಸಿದ್ದ ಜಿಲ್ಲಾಧಿಕಾರಿಗಳು ಈ ಕುರಿತು ಭೂಮಿ ಪರಿಶೀಲನೆಗೆ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು, ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಎಳ್ಳೂರು ಜಿಲ್ಲಾ ಪಂಚಾಯತ್ ಸದಸ್ಯರು ಸಭೆ ನಡೆಸಿ, ಭೂಮಿಯನ್ನು ದನಗಳನ್ನು ಮೇಯಿಸಲು ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶ ವಿರೋಧಿಸಲು ನಿರ್ಣಯವನ್ನು  ಅಂಗೀಕರಿಸಿದ್ದಾರೆಂದು ತಿಳಿದುಬಂದಿದೆ.

ಈ ಭೂಮಿಯ ಮೇಲೆ ಹಲವು ರೈತರು ಅವಲಂಬಿತರಾಗಿದ್ದಾರೆ. ಇಲ್ಲಿ ಶಾಲೆ, ದೇವಾಲಯ, ಕಸದ ಗೋದಾಮು ಹಾಗೂ ಕೆಲ ಮನೆಗಳೂ ಇವೆ. ಇದೀಗ ಜಿಲ್ಲಾಧಿಕಾರಿಗಳು ಈ ಎಲ್ಲಾ ಕಟ್ಟಡಗಳನ್ನೂ ತೆರವು ಮಾಡುವಂತೆ ಆದೇಶ ಹೊರಡಿಸಿದ್ದಾರೆಂದು ಯಳ್ಳೂರು ಜಿಲ್ಲಾ ಪಂಚಾಯತ್'ನ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

66 ಎಕರೆ 17 ಗುಂಟಾದಲ್ಲಿ ಜಾನುವಾರುಗಳ ಮೇಯಿಸಲು 44 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಆ ಭೂಮಿಯನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಹೇಳುತ್ತಿದ್ದಾರೆ. ಈ ಭೂಮಿಯನ್ನು ವಶಪಡಿಸಿಕೊಂಡಿದ್ದೇ ಆದರೆ, ಉಳಿದ 22 ಎಕರೆ 17 ಗುಂಟಾದಲ್ಲಿ ದನ ಮೇಯಿಸಲು ಸಾಕಾಗುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಈ ಸಂಬಂಧ ಕಾನೂನು ರೀತಿಯಲ್ಲಿ ಹೋರಾಟ ಮಾಡಲು ನಿರ್ಧರಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT