ಹೈಕೋರ್ಟ್ ಆದೇಶವಿದ್ದರೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸುತ್ತ ವಿವಿಧ ರಾಜಕೀಯ ಪಕ್ಷಗಳ ಪೋಸ್ಟರ್‌ಗಳು 
ರಾಜ್ಯ

ಹೈಕೋರ್ಟ್ ಆದೇಶ ಧಿಕ್ಕರಿಸಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸುತ್ತಲೂ ವಿವಿಧ ಪಕ್ಷಗಳ ರಾಜಕೀಯ ನಾಯಕರ ಪೋಸ್ಟರ್

ನಗರದಾದ್ಯಂತ ಬ್ಯಾನರ್, ಪೋಸ್ಟರ್ ಮತ್ತು ಕಟೌಟ್‌ಗಳನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದರೂ, ವಿವಿಧ ರಾಜಕೀಯ ಪಕ್ಷಗಳು ಇನ್ನೂ ಅದನ್ನೂ ಬಿಟ್ಟಿಲ್ಲ. ದೊಮ್ಮಲೂರು-ಇಂದಿರಾನಗರ ಜಂಕ್ಷನ್ ಸುತ್ತಲೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯು ತಮ್ಮದು ಎಂದು ಹೇಳಿಕೊಂಡಿರುವ ವಿವಿಧ ಪಕ್ಷಗಳ ಭಿತ್ತಿ ಪತ್ರಗಳು ರಾರಾಜಿಸುತ್ತಿವೆ.

ಬೆಂಗಳೂರು: ನಗರದಾದ್ಯಂತ ಬ್ಯಾನರ್, ಪೋಸ್ಟರ್ ಮತ್ತು ಕಟೌಟ್‌ಗಳನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದರೂ, ವಿವಿಧ ರಾಜಕೀಯ ಪಕ್ಷಗಳು ಇನ್ನೂ ಅದನ್ನೂ ಬಿಟ್ಟಿಲ್ಲ. ದೊಮ್ಮಲೂರು-ಇಂದಿರಾನಗರ ಜಂಕ್ಷನ್ ಸುತ್ತಲೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯು ತಮ್ಮದು ಎಂದು ಹೇಳಿಕೊಂಡಿರುವ ವಿವಿಧ ಪಕ್ಷಗಳ ಭಿತ್ತಿ ಪತ್ರಗಳು ರಾರಾಜಿಸುತ್ತಿದ್ದು, ಬಿಬಿಎಂಪಿಯಿಂದ ಅನುಮತಿ ಪಡೆದಿರುವ ಪ್ರದೇಶದ ವಿವಿಧ ಖಾಸಗಿ ಸಂಸ್ಥೆಗಳು ಇದಕ್ಕೆ ಅನುದಾನ ನೀಡುತ್ತಿವೆ.

ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಬೆಂಬಲಿಗರು ಈ ಕೆಲಸ ತಮ್ಮದು ಎಂದು ಕಟೌಟ್ ಹಾಕಿದ್ದಾರೆ. ಬಿಜೆಪಿ ಮುಖಂಡ ಹಾಗೂ ಮಾಜಿ ಕಾರ್ಪೊರೇಟರ್ ಶಿವಕುಮಾರ್ ಬೆಂಬಲಿಗರು ಕೂಡ ಇದನ್ನೇ ಹೇಳಿಕೊಂಡು ಕಟೌಟ್ ಹಾಕಿದ್ದಾರೆ. ರಾಜಕೀಯ ನಾಯಕರ ಬೆಂಬಲಿಗರು ಪೋಸ್ಟರ್‌ಗಳನ್ನು ಹಾಕುವ ಮೂಲಕ ಓಲ್ಡ್ ಏರ್‌ಪೋರ್ಟ್ ರಸ್ತೆಯ 200 ಮೀ ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವರದಿಗಳ ಪ್ರಕಾರ, ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆಯನ್ನು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು ಜನವರಿ 15 ರಂದು ಅನಾವರಣಗೊಳಿಸಲಿದ್ದಾರೆ. ಶಿವಕುಮಾರ್ ಬೆಂಬಲಿಗರು ಶಾಂತಿನಗರದ ಮುಂದಿನ ಬಿಜೆಪಿ ಅಭ್ಯರ್ಥಿ ಎಂದು ಬೃಹತ್ ಬ್ಯಾನರ್‌ಗಳನ್ನು ಹಾಕಿದ್ದಾರೆ.

ಕಳೆದ ಬಾರಿ ದೊಮ್ಮಲೂರು ವಾರ್ಡ್ ಪ್ರತಿನಿಧಿಸಿದ್ದ ಲಕ್ಷ್ಮೀನಾರಾಯಣ ಗುಂಡಣ್ಣ ತಮ್ಮ ಬೆಂಬಲಿಗರಿಗೆ ಒಂದೇ ಒಂದು ಪೋಸ್ಟರ್ ಕೂಡ ಹಾಕದಂತೆ ಮನವಿ ಮಾಡಿದ್ದಾರೆ. 'ಹೈಕೋರ್ಟ್ ನಿರ್ದೇಶನಗಳ ಬಗ್ಗೆ ನನಗೆ ತಿಳಿದಿದೆ ಮತ್ತು ನಾನು ಈ ಪೋಸ್ಟರ್ ಸಂಸ್ಕೃತಿಯಲ್ಲಿ ಭಾಗಿಯಾಗುವುದಿಲ್ಲ' ಎಂದು ಗುಂಡಣ್ಣ ಹೇಳಿದರು.

ಹೈಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕಂದಾಯ ಇಲಾಖೆ ವಿಶೇಷ ಆಯುಕ್ತ ಆರ್.ಎಲ್. ದೀಪಕ್ ಮಾತನಾಡಿ, 'ಈಗಾಗಲೇ ಎಂಟು ವಲಯಗಳ ಎಲ್ಲಾ ಜಂಟಿ ಆಯುಕ್ತರು ಹಾಗೂ ಬಿಬಿಎಂಪಿಯ ಕಂದಾಯ ಅಧಿಕಾರಿಗಳಿಗೆ ಬ್ಯಾನರ್ ತೆರವು ಮಾಡಿ ಪ್ರಕರಣ ದಾಖಲಿಸುವಂತೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

ಈ ಘಟನೆಗೂ ಇದು ಅನ್ವಯಿಸುತ್ತದೆ. ನಾವು ಎಲ್ಲಾ ಬ್ಯಾನರ್‌ಗಳು ಮತ್ತು ಕಟೌಟ್‌ಗಳನ್ನು ತೆಗೆದುಹಾಕುತ್ತೇವೆ ಮತ್ತು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಪ್ರಕರಣಗಳನ್ನು ದಾಖಲಿಸಲು ಅಧಿಕಾರಿಗಳಿಗೆ ಸೂಚಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT