ಸಂಗ್ರಹ ಚಿತ್ರ 
ರಾಜ್ಯ

ಸಂಕ್ರಾಂತಿ ಸಂಭ್ರಮ: ಇಂದು ಗವಿಗಂಗಾಧರೇಶ್ವರನಿಗೆ ಸೂರ್ಯಾಭಿಷೇಕ!

ಇಂದು ನಾಡಿಗೆ ಸಂಕ್ರಾಂತಿ ಸಂಭ್ರಮ. ಜೊತೆಗೆ ಸೂರ್ಯನು ದಕ್ಷಿಣಾಯನದಿಂದ ಪಥ ಬದಲಿಸಿ ಉತ್ತರಾಯಣ ಚಲನೆಗೆ ತೊಡಗುವ ದಿನ. ಹೀಗಾಗಿ, ನಗರದ ಶ್ರೀ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಐತಿಹಾಸಿಕ ಕೌತುಕ ಕಣ್ತುಂಬಿಕೊಳ್ಳಲು ಕ್ಷಣಗಣನೆ ಶುರುವಾಗಿದೆ.

ಬೆಂಗಳೂರು: ಇಂದು ನಾಡಿಗೆ ಸಂಕ್ರಾಂತಿ ಸಂಭ್ರಮ. ಜೊತೆಗೆ ಸೂರ್ಯನು ದಕ್ಷಿಣಾಯನದಿಂದ ಪಥ ಬದಲಿಸಿ ಉತ್ತರಾಯಣ ಚಲನೆಗೆ ತೊಡಗುವ ದಿನ. ಹೀಗಾಗಿ, ನಗರದ ಶ್ರೀ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಐತಿಹಾಸಿಕ ಕೌತುಕ ಕಣ್ತುಂಬಿಕೊಳ್ಳಲು ಕ್ಷಣಗಣನೆ ಶುರುವಾಗಿದೆ.

ಸಂಜೆ 5:17 ರಿಂದ 5:37ರ ನಡುವೆ ಸೂರ್ಯನ ಕಿರಣಗಳು ಗವಿ ಗಂಗಾಧರ ಸ್ವಾಮಿಯನ್ನು ಸ್ಪರ್ಶಿಸಲಿದೆ. 30 ರಿಂದ 40 ಸೆಕೆಂಡ್ ಗಳ ಕಾಲ ಗವಿಗಂಗಾಧರೇಶ್ವರರ ಮೇಲೆ ಸೂರ್ಯನ ಕಿರಣಗಳು ಬೀಳಲಿದ್ದು, ಪ್ರಕೃತಿಯ ಈ ವಿಸ್ಮಯದ ವೀಕ್ಷಣೆಗೆ ಭಕ್ತರು ಕಾತುರರಾಗಿದ್ದಾರೆ.

ಮೊದಲು ನಂದಿಯನ್ನು ಹಾದುಹೋಗುವ ಸೂರ್ಯನ ಕಿರಣಗಳು ನಂತರ ಪಾಣಿ ಪೀಠದ ಮೂಲಕ ಶಿವಲಿಂಗವನ್ನು ಸ್ಪರ್ಶಿಸಲಿದೆ.

ಈ ವಿಸ್ಮಯ ಕಣ್ತುಂಬಿಸಿಕೊಳ್ಳಲು ದೇವಸ್ಥಾನದ ಹೊರ ಭಾಗದಲ್ಲಿ ಎಲ್‌ಇಡಿ ಸ್ಕ್ರೀನ್‌ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ ಟೆಂಟ್, ಶಾಮಿಯಾನದ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT