ಸಂಗ್ರಹ ಚಿತ್ರ 
ರಾಜ್ಯ

ಸಂಕ್ರಾಂತಿ ಸಂಭ್ರಮ: ಇಂದು ಗವಿಗಂಗಾಧರೇಶ್ವರನಿಗೆ ಸೂರ್ಯಾಭಿಷೇಕ!

ಇಂದು ನಾಡಿಗೆ ಸಂಕ್ರಾಂತಿ ಸಂಭ್ರಮ. ಜೊತೆಗೆ ಸೂರ್ಯನು ದಕ್ಷಿಣಾಯನದಿಂದ ಪಥ ಬದಲಿಸಿ ಉತ್ತರಾಯಣ ಚಲನೆಗೆ ತೊಡಗುವ ದಿನ. ಹೀಗಾಗಿ, ನಗರದ ಶ್ರೀ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಐತಿಹಾಸಿಕ ಕೌತುಕ ಕಣ್ತುಂಬಿಕೊಳ್ಳಲು ಕ್ಷಣಗಣನೆ ಶುರುವಾಗಿದೆ.

ಬೆಂಗಳೂರು: ಇಂದು ನಾಡಿಗೆ ಸಂಕ್ರಾಂತಿ ಸಂಭ್ರಮ. ಜೊತೆಗೆ ಸೂರ್ಯನು ದಕ್ಷಿಣಾಯನದಿಂದ ಪಥ ಬದಲಿಸಿ ಉತ್ತರಾಯಣ ಚಲನೆಗೆ ತೊಡಗುವ ದಿನ. ಹೀಗಾಗಿ, ನಗರದ ಶ್ರೀ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಐತಿಹಾಸಿಕ ಕೌತುಕ ಕಣ್ತುಂಬಿಕೊಳ್ಳಲು ಕ್ಷಣಗಣನೆ ಶುರುವಾಗಿದೆ.

ಸಂಜೆ 5:17 ರಿಂದ 5:37ರ ನಡುವೆ ಸೂರ್ಯನ ಕಿರಣಗಳು ಗವಿ ಗಂಗಾಧರ ಸ್ವಾಮಿಯನ್ನು ಸ್ಪರ್ಶಿಸಲಿದೆ. 30 ರಿಂದ 40 ಸೆಕೆಂಡ್ ಗಳ ಕಾಲ ಗವಿಗಂಗಾಧರೇಶ್ವರರ ಮೇಲೆ ಸೂರ್ಯನ ಕಿರಣಗಳು ಬೀಳಲಿದ್ದು, ಪ್ರಕೃತಿಯ ಈ ವಿಸ್ಮಯದ ವೀಕ್ಷಣೆಗೆ ಭಕ್ತರು ಕಾತುರರಾಗಿದ್ದಾರೆ.

ಮೊದಲು ನಂದಿಯನ್ನು ಹಾದುಹೋಗುವ ಸೂರ್ಯನ ಕಿರಣಗಳು ನಂತರ ಪಾಣಿ ಪೀಠದ ಮೂಲಕ ಶಿವಲಿಂಗವನ್ನು ಸ್ಪರ್ಶಿಸಲಿದೆ.

ಈ ವಿಸ್ಮಯ ಕಣ್ತುಂಬಿಸಿಕೊಳ್ಳಲು ದೇವಸ್ಥಾನದ ಹೊರ ಭಾಗದಲ್ಲಿ ಎಲ್‌ಇಡಿ ಸ್ಕ್ರೀನ್‌ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ ಟೆಂಟ್, ಶಾಮಿಯಾನದ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT