ಸಿಎಂ ಬೊಮ್ಮಾಯಿ 
ರಾಜ್ಯ

ಯುವಜನತೆಗೆ ಸರ್ಕಾರ ಆದ್ಯತೆ; ಕನ್ನಡದಲ್ಲಿ ಶಬ್ದ ಕಲಿತು ಸಂದೇಶ ನೀಡಬೇಕು: ಯುವಜನೋತ್ಸವ ಸಮಾರೋಪದಲ್ಲಿ ಸಿಎಂ ಬೊಮ್ಮಾಯಿ ಸಲಹೆ

ನಾವು ಯಾವುದೇ ರಾಜ್ಯಕ್ಕೆ ಸೇರಿದವರಾಗಲಿ, ಏನೇ ಮಾಡಲಿ ಕೊನೆಯಲ್ಲಿ ನಮ್ಮೆಲ್ಲರ ಹೃದಯದಲ್ಲಿ ತುಡಿಯುವುದು ಭಾರತ ಮಾತೆ. ಭಾರತ ಮಾತೆ ನಮ್ಮೆಲ್ಲರನ್ನೂ ಬೆಸೆಯುತ್ತಾಳೆ. ಹೀಗಾಗಿ ನಮ್ಮ ಜೀವನ ಭಾರತದ ಒಳಿತಿಗಾಗಿ ಸದಾ ಮಿಡಿಯುತ್ತಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಧಾರವಾಡ: ನಾವು ಯಾವುದೇ ರಾಜ್ಯಕ್ಕೆ ಸೇರಿದವರಾಗಲಿ, ಏನೇ ಮಾಡಲಿ ಕೊನೆಯಲ್ಲಿ ನಮ್ಮೆಲ್ಲರ ಹೃದಯದಲ್ಲಿ ತುಡಿಯುವುದು ಭಾರತ ಮಾತೆ. ಭಾರತ ಮಾತೆ ನಮ್ಮೆಲ್ಲರನ್ನೂ ಬೆಸೆಯುತ್ತಾಳೆ. ಹೀಗಾಗಿ ನಮ್ಮ ಜೀವನ ಭಾರತದ ಒಳಿತಿಗಾಗಿ ಸದಾ ಮಿಡಿಯುತ್ತಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಯುವಜನರು ತಮ್ಮ ಕೆಲಸದಲ್ಲಿ, ಸಾಧನೆಯಲ್ಲಿ ದೇಶಕ್ಕೋಸ್ಕರ ಕೆಲಸ ಮಾಡಿ, ದೇಶಕ್ಕೆ ಒಳ್ಳೆಯ ಹೆಸರು ತರುವಲ್ಲಿ ಸಾಧನೆ ಮಾಡಿ ಖುಷಿಯನ್ನು ಗಳಿಸಬೇಕು. ಖುಷಿ ನಮ್ಮ ನಮ್ಮ ಕೆಲಸ ಕಾರ್ಯಗಳಲ್ಲಿಯೇ ಸಿಗುತ್ತದೆ. ಹಿಮಾಲಯ ಪರ್ವತ ಏರಿ ತೇನ್ ಸಿಂಗ್ ಭಾರತೀಯ ತ್ರಿವರ್ಣ ಧ್ವಜ ಹಾರಿಸಿದ ಘಟನೆಯನ್ನು ವಿವರಿಸಿದರು.

ವಿದೇಶಗಳಿಗೆ ಹೋಲಿಸಿದರೆ ಭಾರತದ ಶಿಕ್ಷಣ ವ್ಯವಸ್ಥೆ ಬಹಳ ಮುಂದಿದೆ. ನಮ್ಮ ದೇಶದ ಜನರ ಬುದ್ದಿಮಟ್ಟ ವಿದೇಶಿಯರಿಗೆ ಹೋಲಿಸಿದರೆ ಹೆಚ್ಚಾಗಿದೆ. ನಮ್ಮ ಸಂಸ್ಕೃತಿ, ಸಂಸ್ಕಾರ ಬೇರೆ ದೇಶಗಳಿಂದ ವಿಭಿನ್ನವಾಗಿದ್ದು ನಾವು ಅದ್ವಿತೀಯ ಸ್ಥಾನದಲ್ಲಿ ನಿಲ್ಲುತ್ತೇವೆ. ನಮ್ಮ ದೇಶದ ಜನಸಂಖ್ಯೆ ದೇಶದ ತಾಕತ್ತು ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ಗರೀಬ್ ಕಲ್ಯಾಣ ಯೋಜನೆಯಿಂದ ಇಂದು ದೇಶದ ಜನರು ಹಸಿವಿನಿಂದ ಕೂರುವ, ಸಾಯುವ ಪರಿಸ್ಥಿತಿ ಇಲ್ಲ, ಕೋವಿಡ್ ಸಾಂಕ್ರಾಮಿಕ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ನಮ್ಮ ದೇಶದ ಆರ್ಥಿಕತೆ, ಅವಕಾಶ, ಜನರ ಜೀವನ ಮಟ್ಟ ಸುಧಾರಿಸಿದೆ, ಸ್ಕಿಲ್ ಇಂಡಿಯಾ ಕಾರ್ಯಕ್ರಮ, ಮುದ್ರಾ ಯೋಜನೆ ಶಿಕ್ಷಣ ಜೊತೆಗೆ  ಯುವಜನತೆಗೆ ಬಹಳ ಅನುಕೂಲವಾಗುತ್ತಿದೆ ಎಂದು ಶ್ಲಾಘಿಸಿದರು.

ಯುವಕರಿಗೆ ಕರ್ನಾಟಕ ಆದ್ಯತೆ: ನಮ್ಮ ಯುವಜನತೆಗೆ ಕರ್ನಾಟಕ ಸರ್ಕಾರ ಬಹಳ ಕಾರ್ಯಕ್ರಮಗಳನ್ನು ತಂದಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಆರಂಭಿಸಲಾಗುವುದು. ಯುವಜನತೆಗೆ ಉದ್ಯೋಗಕ್ಕೆ ಪ್ರಾಜೆಕ್ಟ್ ಗಳನ್ನು ನೀಡಲಾಗುತ್ತದೆ. 5 ಲಕ್ಷ ಯುವಕರಿಗೆ ಸ್ವ ಉದ್ಯೋಗದಡಿ ಕೆಲಸ ನೀಡುವ ಯೋಜನೆಯನ್ನು ಸರ್ಕಾರ ಮಾಡಿದೆ ಎಂದು ಹೇಳಿದರು.

ಯುವನೀತಿ ಜಾರಿಗೆ ತರಲಾಗಿದ್ದು, ಅದರಲ್ಲಿ ಶಿಕ್ಷಣ, ಉದ್ಯೋಗ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಅವಕಾಶಗಳಿವೆ. ಯುವನೀತಿಗೆ ಸ್ವಾಮಿ ವಿವೇಕಾನಂದರ ಯೋಚನೆಗಳೇ ಪ್ರೇರಣೆಯಾಗಿವೆ. 

ಜೀವನವೊಂದು ಆಟ, ಜೀವಿಸಲು ನಾವು ಆಡಬೇಕು ಹೊರತು ಬೇರೆಯವರಿಗೆ ತೊಂದರೆಯನ್ನುಂಟುಮಾಡಲು ಅಲ್ಲ. ಎಲ್ಲರೂ ನ್ಯಾಯನಿಷ್ಠುರವಾಗಿ ಆಟವಾಡಬೇಕು, ನಿಮ್ಮ ಯಶಸ್ಸು ನಿಮ್ಮ ಕೈಯಲ್ಲಿದೆ ಎಂದರು.

ಕನ್ನಡ ಶಬ್ದ ಬೆಳೆಸೋಣ: ಕನ್ನಡಿಗರಾಗಿ ನಾವು ಕನ್ನಡವನ್ನು ಮಾತನಾಡಿ ಬೇರೆ ರಾಜ್ಯದವರಿಂದ ಬಂದವರಲ್ಲಿ ಕನ್ನಡದಲ್ಲಿ ಮಾತನಾಡಿ ಅವರಲ್ಲಿ ಕನ್ನಡ ಭಾಷೆಯನ್ನು ಪರಿಚಯಿಸಿ ನಮ್ಮ ಭಾಷೆಯನ್ನು ಉಳಿಸಿ ಬೆಳೆಸೋಣ ಎಂದು ಸಿಎಂ ಬೊಮ್ಮಾಯಿ ಕಿವಿಮಾತು ಹೇಳಿದರು.

ಕನ್ನಡದಲ್ಲಿ ಏಳು ಶಬ್ದ ಕಲಿತು ಕನ್ನಡ ಭಾಷೆಯಲ್ಲಿಯೇ ಸಂದೇಶ ಕಳುಹಿಸಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT