ರಸ್ತೆಗಿಳಿದಿರುವ ಕೆಎಸ್ಆರ್'ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್. 
ರಾಜ್ಯ

ಕೆಎಸ್​​​ಆರ್​​​ಟಿಸಿಯ ಮೊದಲ ಎಲೆಕ್ಟ್ರಿಕ್​​​ ಬಸ್​'ಗೆ ಅಧಿಕೃತ ಚಾಲನೆ

ಕೆಎಸ್‍ಆರ್ ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‍ಗೆ ಸೋಮವಾರ ಅಧಿಕೃತ ಚಾಲನೆ ಸಿಕ್ಕಿದ್ದು, ಕಳೆದ ಒಂದು ವಾರದಿಂದ ಡಿಪೋನಲ್ಲೇ ಪ್ರಾಯೋಗಿಕವಾಗಿ ಓಡಾಟ ನಡೆಸುತ್ತಿದ್ದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು ಇಂದು ರಸ್ತೆಗೆ ಇಳಿದಿವೆ.

ಬೆಂಗಳೂರು: ಕೆಎಸ್‍ಆರ್ ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‍ಗೆ ಸೋಮವಾರ ಅಧಿಕೃತ ಚಾಲನೆ ಸಿಕ್ಕಿದ್ದು, ಕಳೆದ ಒಂದು ವಾರದಿಂದ ಡಿಪೋನಲ್ಲೇ ಪ್ರಾಯೋಗಿಕವಾಗಿ ಓಡಾಟ ನಡೆಸುತ್ತಿದ್ದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು ಇಂದು ರಸ್ತೆಗೆ ಇಳಿದಿವೆ.

ಮೆಜೆಸ್ಟಿಕ್​ ಕೆಎಸ್​​ಆರ್​​ಟಿಸಿ ನಿಲ್ದಾಣದ ಡಿಸಿ ಚಂದ್ರಶೇಖರ್ ಹಾಗೂ ಕೆಎಸ್​​​ಆರ್​​​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಲಕ್ಷ್ಮಣ್ ಅವರು ಮೆಜೆಸ್ಟಿಕ್ ಕೆಎಸ್​​​ಆರ್​​​ಟಿಸಿ ನಿಲ್ದಾಣದಲ್ಲಿ ಎಲೆಕ್ಟ್ರಿಕ್​ ಬಸ್​​ಗೆ ಚಾಲನೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ. ಎಕ್ಸ್​​​ಪ್ರೆಸ್ ವೇನಲ್ಲಿ ಈ ಕೆಎಸ್​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತಿದೆ. ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್​​​ ಬಸ್​​ನಲ್ಲಿ ವಿದ್ಯಾರ್ಥಿ ಪಾಸ್​​ಗೆ ಅವಕಾಶವಿಲ್ಲ. ಮುಂದಿನ ಮೂರು ತಿಂಗಳಲ್ಲಿ 50 ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಲಿವೆ. ಬೆಂಗಳೂರಿನ ಹತ್ತಿರದ ಜಿಲ್ಲೆಗಳಿಗೆ ಸಂಚರಿಸಲಿವೆ. 300 ಕಿ.ಮೀ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್​​ ಬಸ್ ಓಡಿಸಲು ಕೆಎಸ್​​ಆರ್​ಟಿಸಿ ನಿರ್ಧಾರ ಮಾಡಿದೆ.

ಇ-ಬಸ್‌ಗಳು ಆರಾಮದಾಯಕವಾದ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟ್​ಗು ಚಾರ್ಜಿಂಗ್ ಸಾಕೆಟ್‌, ಎಸಿ​ ವೆಂಟ್‌ಗಳು, ಓದುವ ದೀಪಗಳು ಇನ್ನೂ ಅನೇಕ ಸೌಲಭ್ಯಗಳನ್ನು ಒಳಗೊಂಡಿದೆ.

ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದು ರಾಜ್ಯಕ್ಕೆ ಬಂದಿದ್ದು, ಈಗಾಗಲೆ ಟ್ರಯಲ್​ ರೈಡ್​​ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಮೊದಲ ಇ-ಬಸ್ ಜನವರಿ 16ರಂದು​ ಬೆಂಗಳೂರಿನಿಂದ ಹೊರಟು ಮೈಸೂರು ತಲುಪುತ್ತದೆ. ಬೆಂಗಳೂರಿಂದ ಮೈಸೂರಿಗೆ ಹೊರಡುವ ಎಲೆಕ್ಟ್ರಿಕ್​ ಬಸ್​​ ತಡೆರಹಿತವಾಗಿದ್ದು, ಬಸ್​ಗೆ ಪ್ರಿಮಿಯಂ ಸರ್ವಿಸ್​ ಪಾಸ್​​ ಹೊಂದಿರುತ್ತದೆ.

ಎಲೆಕ್ಟ್ರಿಕ್​ ಬಸ್​​ಗಳನ್ನು ಒಂದು ಸಾರಿ ಚಾರ್ಜ್​ ಮಾಡಿದರೆ 300ಕೀಮಿ ಸಂಚರಿಸುತ್ತದೆ. ಇನ್ನು ಫೆಬ್ರವರಿಯಲ್ಲಿ ರಸ್ತೆಗಿಳಿಯುವ 50 ಬಸ್​ಗಳು ಬೆಂಗಳೂರಿನಿಂದ ಮಡಿಕೇರಿ, ವಿರಾಜ​ಪೇಟೆ, ಚಿಕ್ಕಮಗಳೂರು, ದಾವಣಗೇರೆ ಮತ್ತು ಶಿವಮೊಗ್ಗ ನಗರಕ್ಕೆ ಸಂಪರ್ಕ ಕಲ್ಪಿಸಲಿವೆ.

ಈಗಾಗಲೆ ಬಸ್​ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಚಾರ್ಜಿಂಗ್​ ಪಾಯಿಂಟ್​ಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟೆ, ದಾವಣಗೇರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಬಸ್​ ನಿಲ್ದಾಣಗಳಲ್ಲಿ ಚಾರ್ಜಿಂಗ್​ ಪಾಯಿಂಟ್​ ಇರಿಸಲಾಗುತ್ತದೆ.

ಎಲೆಕ್ಟ್ರಿಕ್​ ಬಸ್​ಗಳ ಕಾರ್ಯನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್  ನಿರ್ವಹಿಸಲಿದೆ. ಈ ನಿರ್ವಹಣೆಗೆ ಕೆಎಸ್​​ಆರ್​ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಕಿಮೀಗೆ 55 ರೂಪಾಯಿಗಳನ್ನು ಪಾವತಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT