ವೇದಿಕೆ ಮೇಲೆ ಕನ್ನಡದ ಹಾಡು ಹಾಡುತ್ತಿರುವ ಪ್ರಹ್ಲಾದ್ ಜೋಶಿ. 
ರಾಜ್ಯ

ರಾಷ್ಟ್ರೀಯ ಯುವಜನೋತ್ಸವ: 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು...' ಹಾಡು ಹಾಡಿದ ಸಚಿವ ಪ್ರಹ್ಲಾದ್​ ಜೋಶಿ

ರಾಷ್ಟ್ರೀಯ ಯುವಜನೋತ್ಸವದಲ್ಲಿ ಡಾ.ರಾಜ್​ಕುಮಾರ್​ ಅವರ ಜನಪ್ರಿಯ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡನ್ನು ಹಾಡುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಭಾನುವಾರ ಸ್ಥಳದಲ್ಲಿ ನೆರೆದಿದ್ದವರ ಗಮನ ಸೆಳೆದರು.

ಧಾರವಾಡ: ರಾಷ್ಟ್ರೀಯ ಯುವಜನೋತ್ಸವದಲ್ಲಿ ಡಾ.ರಾಜ್​ಕುಮಾರ್​ ಅವರ ಜನಪ್ರಿಯ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡನ್ನು ಹಾಡುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಭಾನುವಾರ ಸ್ಥಳದಲ್ಲಿ ನೆರೆದಿದ್ದವರ ಗಮನ ಸೆಳೆದರು.

ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವಜನೋತ್ಸವದಲ್ಲಿ ಆಲ್​ ಒಕೆ ತಂಡಕ್ಕೆ ಜೋಶಿ ನೆನಪಿನ ಕಾಣಿಕೆ‌ ಕೊಡಲು ವೇದಿಕೆ ಮೇಲೆ ಆಗಮಿಸಿದ್ದರು.

ಈ ವೇಳೆ ತಂಡದ ಸದಸ್ಯರು ಅವರನ್ನು ಹಾಡಲು ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಜೋಶಿಯವರು, 'ನಾನು ವೇದಿಕೆ ಮೇಲೆ ಮೆಮೆಂಟೊ ಕೊಡಲು ಬಂದಿದ್ದೆ. ಆದರೆ, ನನಗೆ ಹಾಡಬೇಕೆಂಬ ಪನಿಶ್​ಮೆಂಟ್​ ಕೊಡುತ್ತಿದ್ದಾರೆ' ಎಂದು ಹೇಳಿದರು. ನಂತರ ಗಾಯಕರೊ ಜೊತೆಗೂಡಿ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡನ್ನು ಸಂತಸದಿಂದ ಹಾಡಿದರು.

ಧಾರವಾಡದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಯುವಜನೋತ್ಸವ ಕಾರ್ಯಕ್ರಮ ಇಂದು ಕೊನೆಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ಕೆಸಿಡಿ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಆಗಮಿಸುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಹಾಗು ಅನುರಾಗ್ ಸಿಂಗ್ ಠಾಕೂರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ್ ಹಾಲಪ್ಪ ಬಸಪ್ಪ, ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್