ನರೇಂದ್ರ ಮೋದಿ 
ರಾಜ್ಯ

ಗಿನ್ನಿಸ್ ಪುಸ್ತಕ ಸೇರಲಿದೆ ಪ್ರಧಾನಿ ಮೋದಿ ಕಲಬುರಗಿ ಕಾರ್ಯಕ್ರಮ: 50 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ!

ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಜ.19ರಂದು ಬೃಹತ್‌ ಸಮಾವೇಶ ಆಯೋಜಿಸಿ ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿ ಹಕ್ಕುಪತ್ರ ನೀಡಲಾಗುತ್ತಿದೆ ಎಂದು ತಾಂಡಾ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪಿ.ರಾಜೀವ್‌ ತಿಳಿಸಿದರು.

ಕಲಬುರಗಿ: ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಬೇಕೆಂಬ ಬೇಡಿಕೆ ಈಗ ಈಡೇರುತ್ತಿದ್ದು, ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಜ.19ರಂದು ಬೃಹತ್‌ ಸಮಾವೇಶ ಆಯೋಜಿಸಿ ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿ ಹಕ್ಕುಪತ್ರ ನೀಡಲಾಗುತ್ತಿದೆ ಎಂದು ತಾಂಡಾ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪಿ.ರಾಜೀವ್‌ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸುಮಾರು 50 ಸಾವಿರ ಕುಟುಂಬಗಳಿಗೆ ಭೂಮಿಯ ಹಕ್ಕು ಪತ್ರ ನೀಡುತ್ತಿರುವುದು ಗಿನ್ನೆಸ್ ದಾಖಲೆಯ ವಿಷಯ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. 250ಕ್ಕೂ ಹೆಚ್ಚು ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಲಾಗುತ್ತಿದೆ. ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್ ಮತ್ತು ಕಲಬುರಗಿ ಗಡಿಭಾಗದ ತಾಂಡಾ ಸೇರಿ ಒಟ್ಟು 50 ಸಾವಿರ ಹಕ್ಕುಪತ್ರ ನೀಡಲಾಗುತ್ತಿದೆ ಎಂದರು.

ಸೋಮವಾರ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿದ ನಂತರ ಒಂದೇ ದಿನದಲ್ಲಿ ಸುಮಾರು 50 ಸಾವಿರ ಕುಟುಂಬಗಳು ಭೂಮಿ ಹಕ್ಕು ಪತ್ರ ಪಡೆಯುತ್ತಿರುವುದು ಇದೇ ಮೊದಲು. "ನಾವು ಗಿನ್ನೆಸ್ ದಾಖಲೆ ಪ್ರಾಧಿಕಾರದೊಂದಿಗೆ ಮಾಹಿತಿಯನ್ನು ಹಂಚಿಕೊಂಡಿದ್ದೇವೆ ಮತ್ತು ಅಂತಹ ಯಾವುದೇ ಕಾರ್ಯಕ್ರಮವು ಈ ಹಿಂದೆ ನಡೆದಿಲ್ಲವಾದ್ದರಿಂದ ಅವರು ಈವೆಂಟ್ ಅನ್ನು ಪರಿಗಣಿಸಲು ಒಪ್ಪಿಕೊಂಡರು" ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸುಮಾರು 250 ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿದ ಕೀರ್ತಿ ಡಬಲ್ ಇಂಜಿನ್ ಸರ್ಕಾರಗಳಿಗೆ ಸಲ್ಲುತ್ತದೆ ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ ಅವರ ಪ್ರಯತ್ನದಿಂದ ಸರ್ಕಾರ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸಾಧ್ಯವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US Travel Ban: ಪ್ರಯಾಣ ನಿಷೇಧ ವಿಸ್ತರಿಸಿದ ಟ್ರಂಪ್, 12 ದೇಶಗಳ ಮೂಲ ಪಟ್ಟಿಗೆ ಪ್ಯಾಲೆಸ್ಟೀನಿಯನ್ನರು ಸೇರಿ 20 ದೇಶಗಳ ಸೇರ್ಪಡೆ..!

ಹೊಸ ವರ್ಷ 2026 ಸಂಭ್ರಮಾಚರಣೆ: ಬೆಂಗಳೂರು ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ

'ಆಪರೇಷನ್ ಸಿಂದೂರ್' ಮೊದಲ ದಿನ ಭಾರತಕ್ಕೆ ಸಂಪೂರ್ಣ ಸೋಲು, ಭಾರತೀಯ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿತ್ತು': ಪೃಥ್ವಿರಾಜ್ ಚವಾಣ್-Video

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಉದ್ಘಾಟನಾ ಪಂದ್ಯ: ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್

ಲೋಕಾಯುಕ್ತ ದಾಳಿ: ನಾಲ್ವರು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದ್ದು 18.2 ಕೋಟಿ ರೂ. ಅಕ್ರಮ ಆಸ್ತಿ!

SCROLL FOR NEXT