ವೃದ್ದನನ್ನು ಎಳೆದೊಯ್ದ ಬೈಕ್ ಸವಾರ 
ರಾಜ್ಯ

ಬೆಂಗಳೂರು: ಕಿ.ಮೀ ಗಟ್ಟಲೆ ವೃದ್ಧನ ಎಳೆದೊಯ್ದ ಸ್ಕೂಟರ್ ಸವಾರನ ವಿರುದ್ಧ ಎರಡು ಎಫ್ಐಆರ್ ದಾಖಲು

ಒನ್ ವೇ ನಲ್ಲಿ ಬಂದು ನಿಂತಿದ್ದ ಬೊಲೆರೋಗೆ ಡಿಕ್ಕಿ ಹೊಡೆದು, ಅದನ್ನು ಪ್ರಶ್ನಿಸಲು ಸ್ಕೂಟರ್ ಹಿಡಿದ ವೃದ್ಧ ಚಾಲಕನನ್ನು ಕಿ.ಮೀ ಗಟ್ಟಲೆ ಎಳೆದೊಯ್ದು ಅಮಾನೀವಯವಾಗಿ ನಡೆದುಕೊಂಡ ಸ್ಕೂಟರ್ ಸವಾರ ಸೊಹೇಲ್ ವಿರುದ್ಧ ಪೊಲೀಸರು...

ಬೆಂಗಳೂರು: ಒನ್ ವೇ ನಲ್ಲಿ ಬಂದು ನಿಂತಿದ್ದ ಬೊಲೆರೋಗೆ ಡಿಕ್ಕಿ ಹೊಡೆದು, ಅದನ್ನು ಪ್ರಶ್ನಿಸಲು ಸ್ಕೂಟರ್ ಹಿಡಿದ ವೃದ್ಧ ಚಾಲಕನನ್ನು ಕಿ.ಮೀ ಗಟ್ಟಲೆ ಎಳೆದೊಯ್ದು ಅಮಾನೀವಯವಾಗಿ ನಡೆದುಕೊಂಡ ಸ್ಕೂಟರ್ ಸವಾರ ಸೊಹೇಲ್ ವಿರುದ್ಧ ಪೊಲೀಸರು ಎರಡು ಎಫ್ಐಆರ್ ದಾಖಲಿಸಿದ್ದಾರೆ.

ಅಪಘಾತ ಮಾಡಿ, ವೃದ್ಧನನ್ನು ಎಳೆದೊಯ್ದ ಸ್ಕೂಟರ್ ಸವಾರ ಸೊಹೇಲ್ ವಿರುದ್ಧ ವಿಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮತ್ತು ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ.

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಾಹಿಲ್ ನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಗಡಿ ರಸ್ತೆ ಟೋಲ್ ಗೇಟ್ ಬಳಿ ಈ ಕೃತ್ಯ ನಡೆದಿದ್ದು, ಕುವೆಂಪು ಭಾಷಾಭಾರತಿ ಪ್ರಾಧಿಕಾರಕ್ಕೆ ತೆರಳುತ್ತಿದ್ದ ಬೊಲೆರೋ ಚಾಲಕ 71 ವರ್ಷದ ಮುತ್ತಪ್ಪ ಅವರ ವಾಹನಕ್ಕೆ ಹೋಂಡಾ ಆಕ್ಟಿವಾದಲ್ಲಿ ಬಂದ ದ್ವಿಚಕ್ರ ಸವಾರ ಸೊಹೇಲ್ ಡಿಕ್ಕಿ ಹೊಡೆಸಿದ್ದಾನೆ. ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಸೊಹೇಲ್ ಬೈಕ್ ಜತೆ ಪರಾರಿಯಾಗಲು ಯತ್ನಿಸಿದ್ದು, ಮುತ್ತಪ್ಪ ಆತನ ಗಾಡಿ ಹಿಡಿದುಕೊಂಡಿದ್ದಾರೆ. ಅದನ್ನು ನೋಡಿಯೂ ಕೂಡ ಆತ ಏಕಾಏಕಿ ಗಾಡಿ ಚಲಾಯಿಸಿಕೊಂಡು ಹೋಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT