ಎಂಇಎಸ್'ನ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಮರಾಠಿಗರು. 
ರಾಜ್ಯ

ಎಂಇಎಸ್'ನಿಂದ ಹುತಾತ್ಮ ದಿನ ಆಯೋಜನೆ: ಬೆಳಗಾವಿಯಲ್ಲಿ ಸೆಕ್ಷನ್ 144 ಜಾರಿ, ಭೇಟಿ ರದ್ದುಗೊಳಿಸಿದ ಸಂಸದ ಧೈರ್ಯಶೀಲ ಮಾನೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿಂಸಾಚಾರದಲ್ಲಿ ಮಡಿದವರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸದಸ್ಯರು ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಿದರು.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿಂಸಾಚಾರದಲ್ಲಿ ಮಡಿದವರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸದಸ್ಯರು ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಿದರು.

ಬೆಳಗಾವಿಯಲ್ಲಿ ಎಂಇಎಸ್ ಹುತಾತ್ಮ ದಿನ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಬರುವಂತೆ ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆಗೆ ಅವರಿಗೆ ಆಹ್ವಾನ ನೀಡಿತ್ತು. ಇದರಂತೆ ಬೆಳಗಾವಿ ಪ್ರವಾಸದ ಪಟ್ಟಿಯನ್ನೂ ಸಂಸದರು ಬಿಡುಗಡೆ ಮಾಡಿದ್ದರು.

ಆದರೆ, ಸಂಸದರ ಭೇಟಿಯಿಂದ ಬೆಳಗಾವಿಯಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಂಸದ ಧೈರ್ಯಶೀಲ ಅವರ ಪ್ರವೇಶಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದರು.

ಕಲಂ 144 ಸೆಕ್ಷನ್ ಅಡಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸಂಸದರ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರು. ಈ ಹಿನ್ನೆಲೆಯಲ್ಲಿ ಧೈರ್ಯಶೀಲ ಮಾನೆ ಅವರು ಬೆಳಗಾವಿ ಭೇಟಿಯನ್ನು ರದ್ದುಪಡಿಸಿದರು.

ಈ ನಡುವೆ ನಿತೀಶ್ ಪಾಟೀಲ್ ಅವರ ನಿರ್ಧಾರವನ್ನು ಖಂಡಿಸಿದ ಎಂಇಎಸ್ ಪುಂಡರು, ಮರಾಠಿ ಭಾಷಿಕ ಜನತೆಯೆಲ್ಲರೂ ‘ಹುತಾತ್ಮ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು. ಧೈರ್ಯಶೀಲ ಮಾನೆ ಅವರು ಮಹಾರಾಷ್ಟ್ರದ ಗಡಿ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT