ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: BMTC ಗೆ ಮತ್ತೊಂದು ಬಲಿ, ಬಸ್ ಅಡಿ ಸಿಲುಕಿ​ ಬೈಕ್ ಸವಾರ ಸಾವು

ಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ.

ಬೆಂಗಳೂರು: ಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸೋಮನಹಳ್ಳಿ ಬ್ರಿಡ್ಜ್​ ಬಳಿ ಈ ಘಟನೆ ನಡೆದಿದ್ದು, ಬ್ರಿಡ್ಜ್​ ಬಳಿ ಮುಂದೆ ತೆರಳುತ್ತಿದ್ದ, ಬೈಕ್​ಗೆ ಬಿಎಂಟಿಎಸ್​​ ಬಸ್​ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್​ ಸವಾರ ಸಾವನ್ನಪ್ಪಿದ್ದಾನೆ. 

ಮೃತ ಬೈಕ್ ಚಾಲಕನನ್ನು ವಿಜಯನಗರ ಕುಲದೀಪ್ ಬಗರೇಚಾ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಸ್ ಚಾಲಕ ಆನಂದ್ ರಾವ್ ಹಾಗು ಬಸ್​ನ್ನು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆ ಕೆಳಗೆ ಬಿಎಂಟಿಸಿ (BMTC) ಬಸ್​ ಕೆಳಗೆ ಸಿಲುಕಿ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಬಳಿಕ ನವೆಂಬರ್​ 29 ರಂದು ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್​ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಗರದ ಮಾಗಡಿ ರಸ್ತೆ ಜಂಕ್ಷನ್ ಬಳಿ ನಡೆದಿತ್ತು. ಘಟನೆಯಲ್ಲಿ ಮಂಜುನಾಥ್(25 ವರ್ಷ), ಶಿವರಾಜ್(29 ವರ್ಷ) ಸಾವನ್ನಪ್ಪಿದ್ದರು. ಮೃತರು ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳು ಎಂದು ತಿಳಿಬಂದಿತ್ತು. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT