ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳು 
ರಾಜ್ಯ

ದೇವಸ್ಥಾನಗಳಿಗೆ ದೇಣಿಗೆ ನೀಡುವುದು ಬೇಡ, ಅಗತ್ಯವಿರುವವರಿಗೆ ಸಹಾಯ ಮಾಡಿ: ಪೇಜಾವರ ಶ್ರೀಗಳು

ದೇಗುಲಗಳಿಗೆ ದೇಣಿಗೆ ನೀಡದೆ ಸಂಕಷ್ಟದಲ್ಲಿರುವವರ ನೆರವಿಗೆ ಉಪಯೋಗಿಸಿ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳು ಮಂಗಳವಾರ ಹೇಳಿದ್ದಾರೆ.

ವಿಜಯಪುರ: ದೇಗುಲಗಳಿಗೆ ದೇಣಿಗೆ ನೀಡದೆ ಸಂಕಷ್ಟದಲ್ಲಿರುವವರ ನೆರವಿಗೆ ಉಪಯೋಗಿಸಿ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಸ್ಥಾನಗಳಿಗೆ ನೀಡಲಾಗುತ್ತಿರುವ ದೇಣಿಗೆ ಹಣ ದುರುಪಯೋಗವಾಗುತ್ತಿರುವ ಬಗ್ಗೆ ಅಥವಾ ತಪ್ಪು ಜನರ ಕೈ ಸೇರುತ್ತಿರುವ ಬಗ್ಗೆ ಸಾಕಷ್ಟು ವರದಿಗಳು ಬಂದಿವೆ. ಹೀಗಾಗಿ ಇದನ್ನು ತಡೆಯಲು ದೇವಾಲಾಯಗಳಿಗೆ ನೀಡಲಾಗುತ್ತಿರುವ ದೇಣಿಗೆ ಹಣವನ್ನು ನಿಲ್ಲಿಸುವುದು ಮತ್ತು ಆ ಹಣವನ್ನು ಅಗತ್ಯವಿರುವ ಜನರ ಕಲ್ಯಾಣಕ್ಕಾಗಿ ಬಳಕೆ ಮಾಡುವುದು ಉತ್ತಮ ಮಾರ್ಗವಾಗಿದೆ. ಬಡವರಿಗಾಗಿ ಒಂದು ಸಣ್ಣ ಮನೆಯಾದರೂ ನಿರ್ಮಿಸುವ ಸಾಮರ್ಥ್ಯ ಜನರಲ್ಲಿದ್ದರೆ ಅದನ್ನು ಅವರು ಮಾಡಬೇಕು' ಎಂದು ಹೇಳಿದರು.

ಇದೇ ವೇಳೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದರೆ ದೇಶ ಏನನ್ನು ಸಾಧಿಸುತ್ತದೆ ಎಂಬ ಟೀಕಾಕಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಂದಿನ ರಾಮನವಮಿಗೂ ಮುನ್ನ ಅಗತ್ಯವಿರುವವರಿಗೆ ಏನಾದರೂ ಮಾಡಲು ಅಭಿಯಾನವನ್ನು ಆರಂಭಿಸುವಂತೆ ನಾನು ಜನರಿಗೆ ಸಲಹೆ ನೀಡುತ್ತೇನೆಂದು ತಿಳಿಸಿದ್ದಾರೆ.

ಕಾಲಕಾಲಕ್ಕೆ ಸಮಾಜವನ್ನು ಸ್ವಚ್ಛಗೊಳಿಸಬೇಕು. ಮಠ, ರಾಜಕೀಯ ಪಕ್ಷಗಳು ಬೇಧ – ಭಾವ ಮಾಡಬಾರದು. ಸಂಬಂಧಗಳಲ್ಲಿ ದ್ರೋಹ ಬಗೆಯುವ ಕೆಲಸ ಆಗಬಾರದು. ನಾವು ಸರಿಯಾಗಿ ಇದ್ರೇ ಎಲ್ಲವೂ ಸರಿಯಾಗಿ ಇರುತ್ತೆ. ದೈವ ಭಕ್ತಿ, ದೇಶ ಭಕ್ತಿ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಹಮ್ಮಿಕೊಳ್ಳೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆಂದು ಹೇಳಿದ್ದಾರೆ.

ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವುದು ಒಂದು ಕನಸು ಆಗಿತ್ತು. ಆದರೀಗ ಕೇವಲ ರಾಮಮಂದಿರ ನಿರ್ಮಾಣ ಅಷ್ಟೇ ಆಗಬಾರದು. ಬದಲಿಗೆ ರಾಮರಾಜ್ಯ ಕನಸು ನನಸು ಆಗಬೇಕು. ರಾಮಾಯಣ ಕುರಿತು ಅಧ್ಯಯನ ಮಾಡಬೇಕು ಎಂದು ತಿಳಿಸಿದರು.

ಯಾವುದೇ ರೀತಿಯಲ್ಲಿ ಹಿಂದುಳಿದವರಿಗೆ ಸಹಾಯ ಮಾಡಬೇಕು. ವರ್ಷದ ಕೊನೆಯಲ್ಲಿ, ಪ್ರತಿ ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯದ ಎಲ್ಲಾ ಕಲ್ಯಾಣ ಯೋಜನೆಗಳ ವಿವರಗಳನ್ನು ಅಪ್‌ಲೋಡ್ ಮಾಡುವ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಬೇಕು. ಈ ಬೃಹತ್ ಅಭಿಯಾನವು ರಾಮ ಮಂದಿರದ ಟೀಕಾಕಾರರನ್ನು ಮೌನಗೊಳಿಸುತ್ತದೆ ಎಂಬ ಭರವಸೆ ನನಗಿದೆ ಎಂದರು.

ಜನರು ಶ್ರೀರಾಮನ ಹೆಸರಿನಲ್ಲಿ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಬೇಕು. ಶ್ರೀರಾಮನ ಸೇವೆಯು ದೇಶ ಸೇವೆಗೆ ಸಮಾನವಾಗಿದೆ. ಸಾಮಾನ್ಯ ಜನರು ಸಮಾಜಕ್ಕಾಗಿ ಕೆಲಸ ಮಾಡಬಹುದಾದರೆ, ಶ್ರೀಮಂತರಾಗಿರುವ, ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿರುವ ರಾಜಕಾರಣಿಗಳು ಏಕೆ ಹಾಗೆ ಮಾಡಬಾರದು ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT