ಸಂಗ್ರಹ ಚಿತ್ರ 
ರಾಜ್ಯ

8 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಆಗಮನ: 'ಬೂಸ್ಟರ್ ಡೋಸ್' ಅಭಿಯಾನ ಆರಂಭಕ್ಕೆ ಸರ್ಕಾರ ಸಿದ್ಧತೆ

ಸಾಕಷ್ಟು ವಿಳಂಬದ ನಂತರ 8 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆಗಳು ರಾಜ್ಯಕ್ಕೆ ಆಗಮಿಸಿದ್ದು, ಈ ವಾರಾಂತ್ಯದಿಂದ ವಿಶೇಷ ಲಸಿಕೆ ಅಭಿಯಾನ ಆರಂಭಿಸಲು ಸರ್ಕಾರ ಸಿದ್ಧತೆಗಳ ನಡೆಸುತ್ತಿದೆ.

ಬೆಂಗಳೂರು: ಸಾಕಷ್ಟು ವಿಳಂಬದ ನಂತರ 8 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆಗಳು ರಾಜ್ಯಕ್ಕೆ ಆಗಮಿಸಿದ್ದು, ಈ ವಾರಾಂತ್ಯದಿಂದ ವಿಶೇಷ ಲಸಿಕೆ ಅಭಿಯಾನ ಆರಂಭಿಸಲು ಸರ್ಕಾರ ಸಿದ್ಧತೆಗಳ ನಡೆಸುತ್ತಿದೆ.

ಜನವರಿಯೊಳಗಾಗಿ ಬೂಸ್ಟರ್ ಡೋಸ್ ಲಸಿಕೆಯಲ್ಲಿ ಶೇ.50ರಷ್ಟು ಗುರಿ ತಲುಪಬೇಕೆಂದು ಡಾ.ಸುಧಾಕರ್ ಅವರು ಸೂಚಿಸಿದ್ದರು. ಆದರೆ, ಲಸಿಕೆಗಳ ಕೊರತೆಯಿಂದಾಗಿ ಈ ಗುರಿ ಮುಟ್ಟಲು ಸಾಧ್ಯವಾಗಿಲಿಲ್ಲ.

ಸಾಕಷ್ಟು ಕಡೆ ಕೋವ್ಯಾಕ್ಸಿನ್ ಲಸಿಕೆಗಳಿದ್ದು, ಕೋವಿಶೀಲ್ಡ್ ಹಾಗೂ ಹೆಟೆರೊಲಾಜಸ್ ಕಾರ್ಬೆವಾಕ್ಸ್ ಲಸಿಕೆಗಳ ಕೊರತೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ವಿಶೇಷ ಲಸಿಕೆ ಅಭಿಯಾನ ಸ್ಥಗಿತಗೊಳ್ಳುವಂತಾಗಿತ್ತು. ಬೇಡಿಕೆಗಳು ಇಲ್ಲದಿದ್ದ ಕಾರಣ ಕೇಂದ್ರ ಸರ್ಕಾರದ ಬಳಿ ರಾಜ್ಯ ಸರ್ಕಾರ ಮನವಿ ಇಟ್ಟಿರಲಿಲ್ಲ. ಇದೀಗ ಚೀನಾ, ಅಮೆರಿಕಾ ಹಾಗೂ ಇತರೆ ದೇಶಗಳಲ್ಲಿ ಸೋಂಕು ಹೆಲ್ಲಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಅಲ್ಲದೆ, ಕೋವಿಶೀಲ್ಡ್ ಲಸಿಕೆ ಲಭ್ಯವಿರದ ಕುರಿತಂತೆಯೂ ದೂರುಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ 30 ಲಕ್ಷ ಡೋಸ್ ಲಸಿಕೆಗಳ ರವಾನಿಸುವಂತೆ ಕೇಂದ್ರ ಬಳಿ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿತ್ತು.

ಆರೋಗ್ಯ ಆಯುಕ್ತ ಡಿ.ರಂದೀಪ್ ಮಾತನಾಡಿ, ರಾಜ್ಯದಲ್ಲಿ 8 ಲಕ್ಷ ಕೋವಿಶೀಲ್ಡ್ ಡೋಸ್ ಬಂದಿದ್ದು, ಶೀಘ್ರದಲ್ಲಿಯೇ ವಿಶೇಷ ಲಸಿಕೆ ಅಭಿಯಾನ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಆರೋಗ್ಯ ಮಿಷನ್‌ನ ವ್ಯವಸ್ಥಾಪಕ ನವೀನ್ ಭಟ್ ಮಾತನಾಡಿ, ಬುಧವಾರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ಲಸಿಕೆಗಳ ವಿತರಿಸಲಾಗುತ್ತದೆ. ಈ ತಿಂಗಳೊಳಗೆ 8 ಲಕ್ಷ ಲಸಿಕೆಗಳನ್ನು ನೀಡಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಬೆಂಗಳೂರು ಮತ್ತು ಇತರ ಜಿಲ್ಲೆಗಳಲ್ಲಿ ಗುರುವಾರ ಅಥವಾ ವಾರಾಂತ್ಯದ ವೇಳೆಗೆ ವಿಶೇಷ ಲಸಿಕೆ ಅಭಿಯಾನಗಳು ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಜನರು ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳುವಂತೆ ಉತ್ತೇಜನ ನೀಡಲು ದೊಡ್ಡ ಮಟ್ಟದಲ್ಲಿ ವಿಶೇಷ ಅಭಿಯಾನಗಳ ನಡೆಸಲಾಗುತ್ತದೆ. ಶೇ.75-80ರಷ್ಟು ಲಸಿಕೆಗಳನ್ನು ನೀಡಿದ ಬಳಿಕ ಕೇಂದ್ರ ಬಳಿ ಮತ್ತಷ್ಟು ಲಸಿಕೆಗೆ ಬೇಡಿಕೆಗಳನ್ನು ಇಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ