ಸಂಗ್ರಹ ಚಿತ್ರ 
ರಾಜ್ಯ

ಬಿಬಿಎಂಪಿ ಆಸ್ಪತ್ರೆಗೆ ಟಿಬಿ ಯಂತ್ರಗಳ ಕೊಡುಗೆಯಾಗಿ ನೀಡಿದ ಸಂಸದ ಲೆಹರ್ ಸಿಂಗ್

ರಾಜ್ಯಸಭಾ ಸಂಸದ ಲೆಹರ್ ಸಿಂಗ್ ಅವರು ತಮ್ಮ ಸಂಸದರ ಸ್ಥಳೀಯ ಕ್ಷೇತ್ರಾಭಿವೃದ್ಧಿ ನಿಧಿ (ಎಂಪಿ ಲ್ಯಾಡ್)ಯಿಂದ ಚಾಮರಾಜಪೇಟೆಯ ಡಾ ಬಾಬು ಜಗಜೀವನ್ ರಾಮ್ ಬಿಬಿಎಂಪಿ ರೆಫರಲ್ ಆಸ್ಪತ್ರೆಗೆ ಸಿಬಿಎನ್‍ಎಎಟಿ ಯಂತ್ರ ಮತ್ತು ಮೊಬೈಲ್ ಹ್ಯಾಂಡ್‌ಹೆಲ್ಡ್ ಎಕ್ಸ್-ರೇ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ.

ಬೆಂಗಳೂರು: ರಾಜ್ಯಸಭಾ ಸಂಸದ ಲೆಹರ್ ಸಿಂಗ್ ಅವರು ತಮ್ಮ ಸಂಸದರ ಸ್ಥಳೀಯ ಕ್ಷೇತ್ರಾಭಿವೃದ್ಧಿ ನಿಧಿ (ಎಂಪಿ ಲ್ಯಾಡ್)ಯಿಂದ ಚಾಮರಾಜಪೇಟೆಯ ಡಾ ಬಾಬು ಜಗಜೀವನ್ ರಾಮ್ ಬಿಬಿಎಂಪಿ ರೆಫರಲ್ ಆಸ್ಪತ್ರೆಗೆ ಸಿಬಿಎನ್‍ಎಎಟಿ ಯಂತ್ರ ಮತ್ತು ಮೊಬೈಲ್ ಹ್ಯಾಂಡ್‌ಹೆಲ್ಡ್ ಎಕ್ಸ್-ರೇ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ.

ರೋಗ ಪತ್ತೆ ಹಚ್ಚುವಿಕೆಗೆ ಉನ್ನತ ತಾಂತ್ರಿಕತೆ ಹೊಂದಿರುವ ಸಿಬಿಎನ್‍ಎಎಟಿ ಯಂತ್ರ ಸಹಾಯ ಮಾಡುತ್ತದೆ. ಈ ಯಂತ್ರವು ಎರಡು ಗಂಟೆಗಳೊಳಗೆ ಫಲಿತಾಂಶವನ್ನು ಒದಗಿಸಲಿದೆ.

50 ಲಕ್ಷ ಮೌಲ್ಯದ ಉಪಕರಣಗಳು ಟಿಬಿ ರೋಗನಿರ್ಣಯಕ್ಕೆ ಸಹಾಯ ಮಾಡುತ್ತವೆ. CBNAAT ಯಂತ್ರವು ಎರಡು ಗಂಟೆಗಳೊಳಗೆ ಫಲಿತಾಂಶಗಳನ್ನು ಒದಗಿಸುತ್ತದೆ. ಆರೋಗ್ಯ ಸೌಲಭ್ಯಗಳಿಂದ ವಂಚಿತವಾದ ಪ್ರದೇಶಗಳಲ್ಲಿ ಸಮುದಾಯಗಳನ್ನು ಕ್ಷಯ ಪರೀಕ್ಷೆಗೊಳಪಡಿಸಲು ಮೊಬೈಲ್‌ ಎಕ್ಸ್‌-ರೇ ಯಂತ್ರ ನೆರವಾಗಲಿದೆ. ಇವುಗಳಿಗೆ ಒಟ್ಟು 50 ಲಕ್ಷ ರೂಪಾಯಿ ವೆಚ್ಚವಾಗಿದೆ.

ಲೆಹರ್‌ ಸಿಂಗ್‌ ಮಾತನಾಡಿ, “ಆಧುನಿಕ ತಪಾಸಣಾ ವ್ಯವಸ್ಥೆಯುಳ್ಳ ಸಿಬಿನಾಟ್ ಮತ್ತು ತ್ವರಿತ ಖಚಿತ ಫಲಿತಾಂಶ ನೀಡುವುದನ್ನು ತಿಳಿಸುವ ಮೊಬೈಲ್‌ ಎಕ್ಸ್‌-ರೇ ಉಪಕರಣ ಕ್ಷಯವನ್ನು ಮಣಿಸಲು ಸಹಕಾರಿ. ಪ್ರಧಾನಮಂತ್ರಿ ಕ್ಷಯ-ಮುಕ್ತ ಭಾರತ ಅಭಿಯಾನದಲ್ಲಿ ಎಲ್ಲರೂ ತಮ್ಮ ಕೈಲಾದ ಕೊಡುಗೆ ನೀಡಬೇಕು. 2025 ರೊಳಗೆ ಕರ್ನಾಟಕವನ್ನು ಕ್ಷಯ ಮುಕ್ತಗೊಳಿಸಲು ಕೈ ಜೋಡಿಸಬೇಕು” ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?