ಪ್ರಧಾನಿ ಮೋದಿ 
ರಾಜ್ಯ

ಕರ್ನಾಟಕ ಜನತೆಯ ನಡುವೆ ಇರಲು ಉತ್ಸುಕನಾಗಿದ್ದೇನೆ: ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆಗಮಿಸುತ್ತಿದ್ದು, ನಾಳೆಯ ಕರ್ನಾಟಕ ಪ್ರವಾಸದ ಬಗ್ಗೆ ಕನ್ನಡದಲ್ಲೇ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆಗಮಿಸುತ್ತಿದ್ದು, ನಾಳೆಯ ಕರ್ನಾಟಕ ಪ್ರವಾಸದ ಬಗ್ಗೆ ಕನ್ನಡದಲ್ಲೇ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ   ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ  ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿಯನ್ನು ಬರಮಾಡಿಕೊಳ್ಳಲಿದ್ದಾರೆ. ಅಲ್ಲಿಂದ ಯಾದಗಿರಿ ಜಿಲ್ಲೆ ಹುಣಸಗಿ ತಲೂಕು ಕೊಡೆಕಲ್‌ ಹೆಲಿಪ್ಯಾಡ್‌ಗೆ ತೆರಳಲಿದ್ದಾರೆ. 

ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅವರು ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧೂನೀಕರಣ ಕಾಮಗಾರಿ ಉದ್ಘಾಟನೆ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel