ಸ್ಯಾಂಟ್ರೋ ರವಿ 
ರಾಜ್ಯ

ಸ್ಯಾಂಟ್ರೋ ರವಿಗೆ ಮತ್ತೊಂದು ಸಂಕಷ್ಟ: ಹೊಸ ಪ್ರಕರಣ ದಾಖಲಿಸಿದ ಪತ್ನಿ

ವೇಶ್ಯಾವಾಟಿಕೆ ಕಿಂಗ್‌ಪಿನ್ ಸ್ಯಾಂಟ್ರೋ ರವಿ ಪ್ರಕರಣ  ಸಿಐಡಿಗೆ ವರ್ಗಾವಣೆಯಾಗಿದೆ. ಇದರ ನಡುವೆ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಹೊಸ ಕೇಸ್ ದಾಖಲಾಗಿದೆ.

ಮೈಸೂರು: ವೇಶ್ಯಾವಾಟಿಕೆ ಕಿಂಗ್‌ಪಿನ್ ಸ್ಯಾಂಟ್ರೋ ರವಿ ಪ್ರಕರಣ  ಸಿಐಡಿಗೆ ವರ್ಗಾವಣೆಯಾಗಿದೆ. ಇದರ ನಡುವೆ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಹೊಸ ಕೇಸ್ ದಾಖಲಾಗಿದೆ.

ಚೆಕ್ ಕಳ್ಳತನ ಸಂಬಂಧ ಮೈಸೂರಿನ ದೇವರಾಜ ಪೊಲೀಸ್ ಸ್ಟೇಷನ್​​ನಲ್ಲಿ ಸ್ಯಾಂಟ್ರೊ ರವಿ ವಿರುದ್ಧ ಅವರ ಎರಡನೇ ಪತ್ನಿ ಸೋಮವಾರ ದೂರು ನೀಡಿದ್ದಾರೆ. ಅವರು ಪೊಲೀಸರಿಗೆ ನೀಡಿರುವ ದೂರಿನ ವಿವರ ಇಲ್ಲಿದೆ.

"ಸೆಪ್ಟೆಂಬರ್ 22, 2022 ರಂದು ನಾನು ಮೈಸೂರಿನ ದೇವರಾಜ ಮಾರ್ಕೆಟ್​ಗೆ ಹೋಗಿದ್ದೆ. ನನ್ನ ಸ್ಕೂಟರ್ ಡಿಕ್ಕಿಯಲ್ಲಿ ಚೆಕ್ ಬುಕ್ ಇಟ್ಟಿದ್ದೆ. ಸ್ಯಾಂಟ್ರೋ ರವಿ ಮತ್ತು ಪ್ರಕಾಶ್ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಚೆಕ್ ಬುಕ್ ಕಳವು ಮಾಡಿದ್ದಾರೆ. ಬಳಿಕ ನನ್ನ ಚೆಕ್ ಬುಕ್ ದುರುಪಯೋಗ ಮಾಡಿಕೊಂಡಿದ್ದಾರೆ. ನಾನು ಸೈನ್ ಮಾಡಿರುವ ಎರಡು ಚೆಕ್​ ಅನ್ನು ಕೆನರಾ ಬ್ಯಾಂಕ್​​ಗೆ ನೀಡಿದ್ದಾರೆ.  ನನ್ನ ಪತಿಯೇ ಚೆಕ್ ಕದ್ದು ದುರ್ಬಳಕೆ ಮಾಡಿಕೊಂಡಿರೋದು ಗೊತ್ತಾಗಿದೆ. 10 ಲಕ್ಷ ರೂ. ಚೆಕ್ ಬೌನ್ಸ್ ಕೇಸ್ ಹಾಕಿದ್ದ ಪ್ರಕಾಶ್, 2022ರಲ್ಲಿ ಇದೇ ಚೆಕ್‌ಲೀಫ್ ಬಳಸಿ 5 ಲಕ್ಷ ರೂ. ಕೇಸ್ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ಇನ್ನೆರಡು ಚೆಕ್ ಹಾಗೆಯೇ ಇಟ್ಟುಕೊಂಡಿದ್ದಾರೆ‌. ಈ ಸಂಬಂಧ ದೇವರಾಜ ಪೊಲೀಸ್ ಸ್ಟೇಷನ್​​ನಲ್ಲಿ ಸೆಪ್ಟೆಂಬರ್ 24 ರಂದು ದೂರು ನೀಡಿದ್ದೆ" ಎಂದು ಪತಿ ವಿರುದ್ಧ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಂತ್ರಸ್ಥೆ ನೀಡಿದ ದೂರು ಆಧರಿಸಿ ಸ್ಯಾಂಟ್ರೋ ರವಿ ವಿರುದ್ಧ ಐಪಿಸಿ 465, 468, 506, 420 ಹಾಗೂ 34 ಸೆಕ್ಷನ್​ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ಸ್ಯಾಂಟ್ರೋ’ ರವಿ ಪ್ರಕರಣದ ಕುರಿತು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದ ನಂತರ, ನಾಲ್ವರು ಸದಸ್ಯರ ತಂಡ ಮೈಸೂರಿಗೆ ಆಗಮಿಸಿದ್ದು, ವಿಜಯನಗರ ಪೊಲೀಸರು ಸಂಬಂಧಪಟ್ಟ ಕಡತಗಳನ್ನು ಹಸ್ತಾಂತರಿಸಿದ್ದಾರೆ. ಅವರ ಕಸ್ಟಡಿಗೆ ಕೋರಿ ನ್ಯಾಯಾಲಯಕ್ಕೆ ಅರ್ಜಿಯನ್ನೂ ಸಲ್ಲಿಸಿದ್ದರು. ಮಂಗಳವಾರ ನ್ಯಾಯಾಲಯ ಅವರನ್ನು ಸಿಐಡಿ ವಶಕ್ಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT