ಸುತ್ತೂರಿನಲ್ಲಿ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಆರಂಭವಾಗಿರುವ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ವಸ್ತುಪ್ರದರ್ಶನ, ಕೃಷಿಮೇಳ, ಸಿರಿಧಾನ್ಯ, ಸಾಂಸ್ಕೃತಿಕ ಮೇಳದ ಉದ್ಘಾಟನೆ 
ರಾಜ್ಯ

ಮಾಜಿ ಸಿಎಂಗಳ ಪುತ್ರರ ದೋಣಿ ವಿಹಾರ: ವಿಜಯೇಂದ್ರ ನಾವಿಕ, ಡಾ ಯತೀಂದ್ರ ಪಯಣಿಗ

ರಾಜಕೀಯ ವಿಚಾರ ಬಂದಾಗ ಒಂದು ಪಕ್ಷದ ನಾಯಕರು ಇನ್ನೊಂದು ಪಕ್ಷದ ನಾಯಕರನ್ನು ಬೈಯುವುದು, ದೂಷಿಸುವುದು, ಆರೋಪಿಸುವುದು ಸಾಮಾನ್ಯ. ಕೆಲವೊಮ್ಮೆ ಅದು ಮಿತಿಮೀರುತ್ತದೆ ಕೂಡ. 

ಸುತ್ತೂರು(ಮೈಸೂರು): ರಾಜಕೀಯ ವಿಚಾರ ಬಂದಾಗ ಒಂದು ಪಕ್ಷದ ನಾಯಕರು ಇನ್ನೊಂದು ಪಕ್ಷದ ನಾಯಕರನ್ನು ಬೈಯುವುದು, ದೂಷಿಸುವುದು, ಆರೋಪಿಸುವುದು ಸಾಮಾನ್ಯ. ಕೆಲವೊಮ್ಮೆ ಅದು ಮಿತಿಮೀರುತ್ತದೆ ಕೂಡ. 

ರಾಜಕೀಯ ಬದಿಗಿಟ್ಟು ಹಲವು ಬಾರಿ ರಾಜಕೀಯ ನಾಯಕರು ಒಟ್ಟಿಗೆ ಇರುವುದು ಮಾತನಾಡುವುದು, ಬಾಂಧವ್ಯ ಹೊಂದಿರುವುದನ್ನು ನೋಡುತ್ತೇವೆ.ನಿನ್ನೆ ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಮಾಜಿ ಸಿಎಂಗಳ ಮಕ್ಕಳು ಒಂದಾಗಿದ್ದಾರೆ. ರಾಜಕೀಯ ವಿಚಾರ ಬಂದಾಗ ಕಾಂಗ್ರೆಸ್-ಬಜೆಪಿ ಬದ್ಧ ವೈರಿಗಳು. ಈ ಪಕ್ಷಗಳ ನಾಯಕರು ಒಬ್ಬರಿಗೊಬ್ಬರು ವೇದಿಕೆಗಳಲ್ಲಿ, ಸಾರ್ವಜನಿಕ ಭಾಷಣಗಳಲ್ಲಿ, ಮಾಧ್ಯಮಗಳ ಮುಂದೆ ಸಾಕಷ್ಟು ಟೀಕೆ ಮಾಡುತ್ತಾ, ಒಬ್ಬರಿಗೊಬ್ಬರು ಬೈಯುತ್ತಿರುತ್ತಾರೆ.

ನಿನ್ನೆ ಸಾಯಂಕಾಲ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿರುವ ಸುತ್ತೂರಿನಲ್ಲಿ(Suttur) ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಬಿ ಎಸ್ ಯಡಿಯೂರಪ್ಪನವರ ಮಕ್ಕಳಾದ ಡಾ ಯತೀಂದ್ರ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಒಟ್ಟಿಗೆ ದೋಣಿ ವಿಹಾರ ನಡೆಸಿದ್ದಾರೆ. ವಿಜಯೇಂದ್ರ ನಾವಿಕನ ಸೀಟಿನಲ್ಲಿ ಕುಳಿತರೆ ಯತೀಂದ್ರ ಪಯಣಿಗನಾಗಿ ದೋಣಿ ವಿಹಾರ ನಡೆಸಿದ್ದು ಅಲ್ಲಿನ ಸೌಂದರ್ಯವನ್ನು ಆಸ್ವಾದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್