ಪ್ರವೀಣ್‌ ನೆಟ್ಟಾರು 
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆ ಮರೆಸಿಕೊಂಡ ಇಬ್ಬರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್‌ಐಎ

ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ  ಘೋಷಿಸಿದೆ.

ಮಂಗಳೂರು: ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ  ಘೋಷಿಸಿದೆ.

2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಅವರ ಕೋಳಿ ಅಂಗಡಿಯ ಮುಂದೆಯೇ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದರು.

ಇದೀಗ ನಿಷೇಧಿತ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸದಸ್ಯರಾಗಿರುವ ಬಂಟ್ವಾಳ ತಾಲ್ಲೂಕಿನ ಕೊಡಾಜೆಯ ಮೊಹಮ್ಮದ್‌ ಶರೀಫ್‌ (53) ಮತ್ತು ನೆಕ್ಕಿಲಾಡಿಯ ಕೆಎ ಮಸೂದ್‌  (40) ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು. ಇವರಿಬ್ಬರ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಹೇಳಿದೆ.

ಇವರಿಬ್ಬರ ಮಾಹಿತಿ ನೀಡುವವರನ್ನು ಗೌಪ್ಯವಾಗಿಡಲಾಗುವುದು ಎಂದೂ ಎನ್‌ಐಎ ತಿಳಿಸಿದೆ.

ಈ ಬಗ್ಗೆ ಯಾವುದೇ ಮಾಹಿತಿ ಇದ್ದವರು ಬೆಂಗಳೂರಿನ ಎನ್‌ಐಎ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ಬೆಳ್ಳಾರೆಯ ಎಸ್ ಮಹಮ್ಮದ್ ಮುಸ್ತಫಾ, ಕೊಡಗು ಜಿಲ್ಲೆಯ ಮಡಿಕೇರಿಯ ಎಂಎಚ್ ತುಫೈಲ್, ಕಲ್ಲುಮುಟ್ಲುಮನೆಯ ಎಂ ಆರ್ ಉಮ್ಮರ್ ಫಾರೂಕ್ ಮತ್ತು ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್ ಎಂಬ ನಾಲ್ವರು ಶಂಕಿತರ ಮಾಹಿತಿ ಹಂಚಿಕೊಂಡವರಿಗೆ ಎನ್‌ಐಎ 2022ರ ನವೆಂಬರ್‌ನಲ್ಲಿ ಒಟ್ಟು 14 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT