ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ಕಲಬುರಗಿಗೆ ಪ್ರಧಾನಿ ಮೋದಿ ಆಗಮನ: ರಾಜ್ಯಪಾಲ, ಸಿಎಂ ಸೇರಿ ಗಣ್ಯರಿಂದ ಸ್ವಾಗತ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಲ್ಯಾಣ ಕರ್ನಾಟಕ ಜಿಲ್ಲೆ ಕಲಬುರಗಿಗೆ ಬಂದಿಳಿದಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಅವರನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು ಬರಮಾಡಿಕೊಂಡಿದ್ದಾರೆ. 

ಕಲಬುರಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಲ್ಯಾಣ ಕರ್ನಾಟಕ ಜಿಲ್ಲೆ ಕಲಬುರಗಿಗೆ ಬಂದಿಳಿದಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಅವರನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು ಬರಮಾಡಿಕೊಂಡಿದ್ದಾರೆ. 

ಇಲ್ಲಿಂದ ಪ್ರಧಾನಿಯವರು ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕು ಕೊಕೊಡೆಕಲ್‌ ಹೆಲಿಪ್ಯಾಡ್‌ಗೆ ತೆರಳಿದ್ದಾರೆ. ಮಾರ್ಗದುದ್ದಕ್ಕೂ ಎರಡೂ ಕಡೆ ಲಕ್ಷಾಂತರ ಮಂದಿ ಮೋದಿಯವರ ಸ್ವಾಗತಕ್ಕೆ ಜಮಾಯಿಸಿದ್ದಾರೆ. ಅವರತ್ತ ನಗುತ್ತಾ, ಕೈಬೀಸುತ್ತಾ ಪ್ರಧಾನಿ ಮೋದಿಯವರು ಸಾಗುತ್ತಿದ್ದಾರೆ.

ಕೊಡೆಕಲ್ ತಾಲ್ಲೂಕಿನಲ್ಲಿ ಪ್ರಧಾನಿಯವರು ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮ ನಡೆಯುವ ವೇದಿಕೆಯ ಮುಂಭಾಗ ಪ್ರಧಾನಿಯವರನ್ನು ಸ್ವಾಗತಿಸಲು ಕಲಾತಂಡಗಳು, ಸಾಂಪ್ರದಾಯಿಕ ಉಡುಗೆ ಲಂಬಾಣಿ ಉಡುಗೆಯಲ್ಲಿ ಮಹಿಳೆಯರು ಸಜ್ಜಾಗಿದ್ದಾರೆ. 

ಮಧ್ಯಾಹ್ನ 1 ಗಂಟೆಗೆ ಜಲ್‌ ಜೀವನ್‌ ಮಿಷನ್‌ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸರತ್‌ ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌ 3ನೇ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.  ಅಲ್ಲಿಂದ ಕೊಡೆಕಲ್‌ ಹೆಲಿಪ್ಯಾಡ್‌ಗೆ ರಸ್ತೆ ಮೂಲಕ ಹೊರಡು ಹೆಲಿಪ್ಯಾಡ್‌ ಮೂಲಕ ಕಲಬುರಗಿ ಜಿಲ್ಲೆ ಸೇಡಂ ತಾಲೂಕು ಮಳಖೇಡ ಹೆಲಿಪ್ಯಾಡ್‌ಗೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಸಾಗಿ ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಹಾಗೂ ವಿವಿಧ ಕಾರ್ಯಕ್ರಮಗಳ ಶಿಲನ್ಯಾಸ ಮಾಡಲಿದ್ದಾರೆ.

ಕಳೆದ 10 ದಿನಗಳಲ್ಲಿ ಕರ್ನಾಟಕಕ್ಕೆ ಪ್ರಧಾನಿ ಮೋದಿಯವರ ಎರಡನೇ ಕರ್ನಾಟಕ ರಾಜ್ಯ ಭೇಟಿ ಇದಾಗಿದೆ. ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಇಂದು ಮೋದಿಯವರು 10 ಸಾವಿರದ 800 ಕೋಟಿ ರೂಪಾಯಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 ಕಾಮನ್ವೆಲ್ತ್ ಕ್ರೀಡಾಕೂಟ ಅಹಮದಾಬಾದ್‌ನಲ್ಲಿ ಆಯೋಜಿಸಲು ಶಿಫಾರಸು; ನವೆಂಬರ್ 26 ರಂದು ಅಂತಿಮ ನಿರ್ಧಾರ

ಕೆಮ್ಮಿನ ಸಿರಪ್ ದುರಂತ: ಮಧ್ಯಪ್ರದೇಶದಲ್ಲಿ 3 ವರ್ಷದ ಬಾಲಕಿ ಸಾವು, ಮಕ್ಕಳ ಸಾವಿನ ಸಂಖ್ಯೆ 24ಕ್ಕೆ ಏರಿಕೆ!

ಗಡಿಯಲ್ಲಿ ಮತ್ತೆ ಉದ್ವಿಗ್ನತೆ: ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಗೆ!

ಬೆಂಗಳೂರಿಗರಿಗೆ ಗುಡ್​​ನ್ಯೂಸ್: ನವೆಂಬರ್ 1 ರಿಂದ A ಖಾತಾ ಅಭಿಯಾನ; ಆನ್‌ಲೈನ್ ವ್ಯವಸ್ಥೆಗೆ DCM ಚಾಲನೆ

"ಎಲ್ಲದಕ್ಕೂ ಒಂದು ಮಿತಿ ಇದೆ": ಕಿರಣ್ ಮಜುಂದಾರ್ ಷಾ ವಿರುದ್ಧ DCM ಡಿ.ಕೆ ಶಿವಕುಮಾರ್ ಕಿಡಿ

SCROLL FOR NEXT