ತೇಜಸ್ವಿ ಸೂರ್ಯ, ಅಣ್ಣಾಮಲೈ 
ರಾಜ್ಯ

ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ಬಾಗಿಲು ತೆರೆದಿಲ್ಲ, ಕ್ಷಮೆಯೂ ಕೇಳಿಲ್ಲ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರಿದಿಲ್ಲ, ಕ್ಷಮೆಯೂ ಯಾಚಿಸಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ತೇಜಸ್ವಿ ಸೂರ್ಯ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅಣ್ಣಾಮಲೈ ಕೂಡಾ ಇದ್ದರು ಎನ್ನಲಾಗಿದೆ.

ಚಿಕ್ಕಮಗಳೂರು: ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರಿದಿಲ್ಲ, ಕ್ಷಮೆಯೂ ಯಾಚಿಸಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ತೇಜಸ್ವಿ ಸೂರ್ಯ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅಣ್ಣಾಮಲೈ ಕೂಡಾ ಇದ್ದರು ಎನ್ನಲಾಗಿದೆ.

ನಗರದಲ್ಲಿ ತೇಜಸ್ವಿ ಸೂರ್ಯ ವಿರುದ್ಧದ ವಿವಾದ ಕುರಿತಂತೆ ಪ್ರತಿಕ್ರಿಯಿಸಿದ ಅಣ್ಣಾಮಲೈ, ಎಟಿಆರ್ -72 ಸಣ್ಣ ವಿಮಾನದಲ್ಲಿ ತುರ್ತು ನಿರ್ಗಮನ ದ್ವಾರದ ಬದಿಯ ಸೀಟಿನಲ್ಲಿ ಸಂಸದ ತೇಜಸ್ವಿ ಸೂರ್ಯ ಕುಳಿತಿದ್ದರು. ಅವರು ಮಾತನಾಡುವಾಗ ಕೈ ಬಾಗಿಲಿಗೆ ತಗುಲಿದೆ. ತಕ್ಷಣವೇ ಗಗನಸಖಿಗೆ ವಿಷಯ ತಿಳಿಸಲಾಯಿತು. ಪೈಲಟ್ ಬಂದು ಪರಿಶೀಲಿಸಿದರು. ತೇಜಸ್ವಿ ಸೂರ್ಯ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ಎಳೆದಿಲ್ಲ. ಅವರು ಇದೆಲ್ಲವನ್ನು ಘಟನಾ ವಿವರದಲ್ಲಿ ಉಲ್ಲೇಖಿಸಿರುವುದಾಗಿ ತಿಳಿಸಿದರು.

ಘಟನೆಯಲ್ಲಿ ತೇಜಸ್ವಿ ಅವರು ತಪ್ಪು ಮಾಡಿಲ್ಲ. ವಿಮಾನ ಒಂದು ಗಂಟೆ ತಡವಾಗಿದ್ದಕ್ಕೆ ಅವರು ಪ್ರಯಾಣಿಕರ ಕ್ಷಮೆಯಾಚಿಸಿದ್ದಾರೆ ಎಂದು ಅಣ್ಣಾಮಲೈ ಸಮರ್ಥಿಸಿಕೊಂಡರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT