ನಾರಾಯಣಮೂರ್ತಿ 
ರಾಜ್ಯ

ರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡಬೇಕು: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ

ರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡುವ ಅಗತ್ಯವಿದೆ ಎಂದು ಇನ್ಫೋಸಿಸ್ ಅಧ್ಯಕ್ಷ ಮತ್ತು ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದರು.

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡುವ ಅಗತ್ಯವಿದೆ ಎಂದು ಇನ್ಫೋಸಿಸ್ ಅಧ್ಯಕ್ಷ ಮತ್ತು ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದರು.

ಟೀಚ್ ಫಾರ್ ಇಂಡಿಯಾ ಆಯೋಜಿಸಿದ್ದ ಎರಡನೇ ವಾರ್ಷಿಕ ಇನ್ಸ್‌ಪೈರ್ಡ್ ಕಾನ್‌ಕ್ಲೇವ್‌ನಲ್ಲಿ ಶನಿವಾರ ಮಾತನಾಡಿದ ಅವರು, ಮಗುವಿಗೆ ಶಿಕ್ಷಣದ ಕೊಡುಗೆಯೇ ಪ್ರಮುಖ ಕೊಡುಗೆಯಾಗಿದ್ದು, ಶಿಕ್ಷಕರ ಸರಿಯಾದ ತರಬೇತಿಯ ಮೂಲಕ ಅದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

ಸರ್ಕಾರಿ ಶಿಕ್ಷಕರೂ ವಿನೂತನ ಬೋಧನಾ ವಿಧಾನಗಳನ್ನು ಬಳಸುವಂತಾಗಲು ಶಿಕ್ಷಕರ ತರಬೇತಿಗೆ ಒತ್ತು ನೀಡುವ ಅಗತ್ಯವಿದೆ. ಸರ್ಕಾರಿ ಶಾಲೆಗಳು ‘ಟೀಚ್ ಫಾರ್ ಇಂಡಿಯಾ’ ದಂತಹ ನಾಗರಿಕ ಸಮಾಜ ಸಂಸ್ಥೆಗಳ ಸಹಾಯ ಪಡೆಯಬೇಕು ಎಂದರು.

ಟೀಚ್ ಫಾರ್ ಇಂಡಿಯಾದ ನಗರ ನಿರ್ದೇಶಕಿ ತುಲಿಕಾ ವರ್ಮಾ ಮಾತನಾಡಿ, ತರಗತಿ ಕೊಠಡಿಗಳನ್ನು ಭಾರತದ ನಾಗರಿಕರು ನೋಡಲು ಇಷ್ಟಪಡುವ ಸಣ್ಣ ಆವೃತ್ತಿಗಳಾಗಿ ಅಥವಾ ಸೂಕ್ಷ್ಮರೂಪಗಳಾಗಿ ಪರಿವರ್ತಿಸಬೇಕು, ಅದು ದೇಶವನ್ನು ಬದಲಾಯಿಸಬಹುದು ಎಂದರು.

ಶಿಕ್ಷಣದ ಸಮಸ್ಯೆಯು ಸಂಕೀರ್ಣವಾಗಿದೆ ಮತ್ತು ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ನಾಗರಿಕ ಸಮಾಜವು ವಿದ್ಯಾರ್ಥಿಗಳ ಜೊತೆಯಲ್ಲಿ ಒಗ್ಗೂಡಿ ಸವಾಲುಗಳನ್ನು ಪರಿಹರಿಸುವ ಅಗತ್ಯವಿದೆ. ನಾವೆಲ್ಲರೂ ಸುರಕ್ಷಿತ, ಸಂತೋಷದಾಯಕ ಮತ್ತು ಅದೇ ಸಮಯದಲ್ಲಿ ಫಲಿತಾಂಶ-ಆಧಾರಿತ ಕಲಿಕೆಯ ವಾತಾವರಣವನ್ನು ನೋಡುವುದು, ಅನುಭವಿಸುವುದು ಮತ್ತು ನಂಬುವುದು ತುರ್ತು ಅಗತ್ಯವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಇರಾನ್-ಇಸ್ರೇಲ್ ಯುದ್ಧದ ನಡುವೆ ಭಾರತದ ರಕ್ಷಣಾ ರಫ್ತು ಇತಿಹಾಸದಲ್ಲೇ ದಾಖಲೆಯ ಏರಿಕೆ!, ಖರೀದಿದಾರರು ಯಾರು?

ಭಾರತದತ್ತ ಹೊರಟಿದ್ದ ಇರಾನ್ ತೈಲ ಹೊತ್ತ ಹಡಗು ಏಕಾಏಕಿ ಚೀನಾಗೆ ರೀ-ರೂಟ್; ಕೇಂದ್ರ ಹೇಳಿದ್ದೇನು?

Iran war ನಡುವೆಯೂ ಭಾರತ ದೇಶೀಯ ಮತ್ತು ಬಾಹ್ಯ ಸವಾಲುಗಳ ಯಶಸ್ವಿಯಾಗಿ ನಿರ್ವಹಿಸಿದೆ: EAM Jaishankar

'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ': AAP ಆರೋಪಗಳನ್ನು ತಳ್ಳಿಹಾಕಿದ ರಾಘವ್ ಚಡ್ಡಾ

SCROLL FOR NEXT