ಬೆಂಗಳೂರಿನ ಬನ್ನಪ್ಪ ಪಾರ್ಕ್ ಬಳಿಯ ಸರ್ಕಾರಿ ಶಾಲೆಯ ಮಕ್ಕಳು ಗುರುವಾರ ಬಿಸಿಯೂಟ ಸೇವನೆಗೆ ಸರತಿ ಸಾಲಿನಲ್ಲಿ ನಿಂತಿರುವುದು. 
ರಾಜ್ಯ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆ ಕೇಳಿದರೆ ಕೊಡಬೇಕು: ಸರ್ಕಾರ ಆದೇಶ

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆಯನ್ನು ಕೇಳಿದರೆ ಮೊಟ್ಟೆಯನ್ನೇ ಕೊಡಬೇಕು. ಬಾಳೆಹಣ್ಣು, ಚಿಕ್ಕಿ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆಯನ್ನು ಕೇಳಿದರೆ ಮೊಟ್ಟೆಯನ್ನೇ ಕೊಡಬೇಕು. ಬಾಳೆಹಣ್ಣು, ಚಿಕ್ಕಿ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಸೂಚಿಸಿದೆ. ಆದರೆ, ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು ಹಾಗೂ ಚಿಕ್ಕಿ ನೀಡುತ್ತಿರುವುದು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್ ವಿಶಾಲ್ ಅವರು ಈ ಆದೇಶವನ್ನು ನೀಡಿದ್ದು, ಮಧ್ಯಾಹ್ನದ ಊಟದ ಕುರಿತು ವಿವಿಧ ಮೂಲಗಳಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದೆ. ಹೀಗಾಗಿ ಈ ಸಂಬಂಧ ಸುತ್ತೋಲೆಯನ್ನು ಹೊರಡಿಸಲಾಗಿದೆ. ಯೋಜನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಶಾಲೆಗಳು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಕೆಲವು ನಿಯಮಗಳನ್ನು ಸ್ಪಷ್ಟಪಡಿಸಿದ್ದೇವೆಂದು ಹೇಳಿದ್ದಾರೆ.

ಮಧ್ಯಾಹ್ನದ ಊಟದ ಯೋಜನೆಯಡಿ ಮಕ್ಕಳಿಗೆ ಮೊಟ್ಟೆ ವಿತರಿಸುವ ಕುರಿತು ಪ್ರತಿಕ್ರಿಯೆ ನೀಡಿ, ಮಕ್ಕಳು ಮೊಟ್ಟೆ ಕೇಳಿದರೆ, ಅವರಿಗೆ ಮೊಟ್ಟೆಯನ್ನೇ ನೀಡಬೇಕು. ಮೊಟ್ಟೆ ಕೇಳುವ ಮಕ್ಕಳಿಗೆ ಬಾಳೆಹಣ್ಣು ಹಾಗೂ ಚಿಕ್ಕಿ ನೀಡಬಾರದು. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಹಾಗೂ ಚಿಕ್ಕಿ ನೀಡಬೇಕೆಂದು ಹೇಳಿದ್ದಾರೆ.

ಮೊಟ್ಟೆ ವಿತರಣೆಗೆ ಆರ್ಥಿಕ ಕೊರತೆ ಕುರಿತು ಹಲವು ದೂರುಗಳು ಬಂದಿವೆ. ಮೊಟ್ಟೆಯ ಬೆಲೆ ಬದಲಾಗುತ್ತದೆ, ಮೊಟ್ಟೆ ದರ ಹೆಚ್ಚಳವಾಗಿದ್ದರೆ, ಸೂಕ್ತ ಕ್ರಮ ಕೈಗೊಂಡು ವಿತರಿಸಲು ಎಸ್‌ಡಿಎಂಸಿಗಳಿಗೆ ಸೂಚನೆ ನೀಡಲಾಗಿದೆ. ಆದರೆ ಮೊಟ್ಟೆ ವಿತರಣೆ ಯೋಜನೆಯನ್ನು ಸ್ಥಗಿತಗೊಳಿಸಬಾರದು. ಪ್ರಸ್ತುತ ಸನ್ನಿವೇಶದಲ್ಲಿ ದರ ಪರಿಷ್ಕರಣೆಗೆ ಅವಕಾಶವಿಲ್ಲದ ಕಾರಣ ಮೊಟ್ಟೆ ಖರೀದಿಯಲ್ಲಿ ದರ ಮೀರಿದ್ದರೆ, ತಗಲುವ ವೆಚ್ಚವನ್ನು ಹಿಂದಿನ ದಿನಗಳಲ್ಲಿ ದರ ಕಡಿಮೆ ಇದ್ದ ವೇಳೆ ಉಳಿದಿರುವ ಮೊತ್ತ ಅಥವಾ ಶಾಲಾ ಎಸ್‌ಡಿಎಂಸಿ ಸಮಿತಿಯ ಹಂತದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT