ನ್ಯಾಯಾಧೀಶರು ಮತ್ತು ವಕೀಲರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ. 
ರಾಜ್ಯ

ಕನ್ನಡದ ಕಾನೂನು ನಿಘಂಟು ಸಿದ್ಧಪಡಿಸಲು ತಜ್ಞರ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ವಿವಿಧ ನ್ಯಾಯಾಲಯಗಳು ಕನ್ನಡದಲ್ಲಿ ತೀರ್ಪು ನೀಡಬೇಕು ಎಂದು ಒತ್ತಿ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಲವು ಪ್ರಕರಣಗಳಲ್ಲಿ ಇದರ ಕೊರತೆಯಿಂದ ಗೊಂದಲ ಉಂಟಾಗಿದೆ. ತೀರ್ಪುಗಳು ಮತ್ತು ಆದೇಶಗಳನ್ನು ಕನ್ನಡದಲ್ಲಿ ಭಾಷಾಂತರಿಸಲು ಅವಕಾಶವಿರಬೇಕು ಎಂದು ಭಾನುವಾರ ಹೇಳಿದರು.

ಬೆಂಗಳೂರು: ವಿವಿಧ ನ್ಯಾಯಾಲಯಗಳು ಕನ್ನಡದಲ್ಲಿ ತೀರ್ಪು ನೀಡಬೇಕು ಎಂದು ಒತ್ತಿ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಲವು ಪ್ರಕರಣಗಳಲ್ಲಿ ಇದರ ಕೊರತೆಯಿಂದ ಗೊಂದಲ ಉಂಟಾಗಿದೆ. ತೀರ್ಪುಗಳು ಮತ್ತು ಆದೇಶಗಳನ್ನು ಕನ್ನಡದಲ್ಲಿ ಭಾಷಾಂತರಿಸಲು ಅವಕಾಶವಿರಬೇಕು ಎಂದು ಭಾನುವಾರ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ನ್ಯಾಯಾಧೀಶರು ಮತ್ತು ವಕೀಲರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದಿನನಿತ್ಯ ನ್ಯಾಯಾಲಯದಲ್ಲಿ ಕನ್ನಡದ ಬಳಕೆಯಾಗಲು ಕನ್ನಡದ ಕಾನೂನು ನಿಘಂಟನ್ನು ಸಿದ್ಧಪಡಿಸಲು ತಜ್ಞರ ಸಮಿತಿ ರಚಿಸಬೇಕು. ಸಮಾನಾಂತರ ಕನ್ನಡ ಶಬ್ದಗಳು ರಚನೆಯಾದರೆ ಅವುಗಳನ್ನು ಬಳಸಲು ನ್ಯಾಯಾಧೀಶರಿಗೆ ಅನುಕೂಲವಾಗಲಿದೆ. ಹಲವಾರು ಇಂಗ್ಲಿಷ್ ಶಬ್ಧಗಳಿಗೆ ನೇರವಾದ ಕನ್ನಡದ ಪದಗಳಿಲ್ಲ. ಮಾತೃಭಾಷೆಯಲ್ಲಿ ತೀರ್ಪು ಬರುವ ಅವಶ್ಯಕತೆ ಇದೆ.

ದಿನನಿತ್ಯದ ಆಧಾರದ ಮೇಲೆ ಅನೇಕ ಕಾನೂನು ಪದಗಳನ್ನು ಬಳಸಲಾಗುತ್ತದೆ. ಕೆಲವು ಕಾನೂನು ಪರಿಭಾಷೆಗಳಿಗೆ ಕನ್ನಡ ಪದಗಳನ್ನು ಬಳಸಬಹುದಾದ ನಿಘಂಟನ್ನು ಪ್ರಕಟಿಸುವ ಅವಶ್ಯಕತೆಯಿದೆ. ಇದು ನ್ಯಾಯಾಧೀಶರು ಮತ್ತು ಇತರರಿಗೆ ಸಹಾಯ ಮಾಡುತ್ತದೆ. ಹಲವು ತೀರ್ಪುಗಳಿಗೆ ಕನ್ನಡದಲ್ಲಿ ಸಮಾನ ಪದಗಳಿಲ್ಲ. ಕಾನೂನು ಜ್ಞಾನ ಕೇವಲ ವಕೀಲರಿಗೆ ಮಾತ್ರ ಸೀಮಿತವಾಗದೆ ಆಡಳಿತಾಧಿಕಾರಿಗಳಿಗೂ ಲಭ್ಯವಾಗುವಂತೆ ಮಾಡಬೇಕು. ಕನ್ನಡದಲ್ಲಿ ತೀರ್ಪು ಅಥವಾ ಆದೇಶಗಳನ್ನು ನೀಡುವುದು ಸುಲಭದ ಕೆಲಸವಲ್ಲ ಎಂದು ಹೇಳಿದರು.

“ಪ್ರಕರಣಗಳ ತೀರ್ಪು ಕನ್ನಡದಲ್ಲಿ ಬಾರದಿದ್ದರೆ ಎಷ್ಟೊ ಸಮಸ್ಯೆಗಳಾಗುತ್ತವೆ. ತೀರ್ಪುಗಳನ್ನು ಕನ್ನಡದಲ್ಲಿ ತರ್ಜುಮೆಗೊಳಿಸುವ ವ್ಯವಸ್ಥೆಯಾಗಬೇಕು. ಅವುಗಳನ್ನು ಎಲ್ಲಾ ನ್ಯಾಯಾಲಯಗಳ ಗ್ರಂಥಾಲಯಗಳಿಗೆ ಕಳುಹಿಸಬೇಕು. ಕನಿಷ್ಠ ಪಕ್ಷ ತರ್ಜುಮೆಯಾದ ತೀರ್ಪುಗಳನ್ನು ನೋಡಿಕೊಳ್ಳುವ ಅವಕಾಶವಿರಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT