ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾಲೇಜಿನಲ್ಲಿ ಮಹಿಳೆಯರ ಶೌಚಾಲಯಕ್ಕೆ ಅಕ್ರಮ ಪ್ರವೇಶ ಮಾಡಿದ 42 ವರ್ಷದ ವ್ಯಕ್ತಿ ಬಂಧನ

ಮಹಿಳಾ ಶೌಚಾಲಯಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಜಯನಗರ 4ನೇ ಬ್ಲಾಕ್‌ನಲ್ಲಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಭಯ ಹುಟ್ಟಿಸಿದ 42 ವರ್ಷದ ವ್ಯಕ್ತಿಯನ್ನು ಘಟನೆ ನಡೆದ 13 ದಿನಗಳ ನಂತರ ಹನುಮಂತನಗರದಲ್ಲಿ ಬಂಧಿಸಲಾಗಿದೆ. 

ಬೆಂಗಳೂರು: ಮಹಿಳಾ ಶೌಚಾಲಯಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಜಯನಗರ 4ನೇ ಬ್ಲಾಕ್‌ನಲ್ಲಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಭಯ ಹುಟ್ಟಿಸಿದ 42 ವರ್ಷದ ವ್ಯಕ್ತಿಯನ್ನು ಘಟನೆ ನಡೆದ 13 ದಿನಗಳ ನಂತರ ಹನುಮಂತನಗರದಲ್ಲಿ ಬಂಧಿಸಲಾಗಿದೆ. 

ಜಯನಗರ ಪೊಲೀಸರು ಸಿಸಿಟಿವಿ ಮೂಲಕ ಆರೋಪಿಯ ಚಲನವಲನಗಳನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಯು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿ ವಾಶ್ ರೂಂನಲ್ಲಿ ಆಕೆಯನ್ನು ಕೂಡಿಹಾಕಿ ಪರಾರಿಯಾಗಿದ್ದ. ಇದರಿಂದ ಉತ್ತಮ ಭದ್ರತೆ ಹಾಗೂ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಆರೋಪಿಯನ್ನು ಹನುಮಂತನಗರ 2ನೇ ಹಂತದ ಸುಂಕೇನಹಳ್ಳಿ ಎಕ್ಸ್‌ಟೆನ್ಶನ್ ನಿವಾಸಿ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಆತನನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

'ಕುಮಾರ್ ಅದೇ ಕಾಲೇಜಿನ ಹಳೆಯ ವಿದ್ಯಾರ್ಥಿ ಎಂದು ಹೇಳಿಕೊಳ್ಳುತ್ತಾನೆ. ದುಬೈನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡಿರುವುದಾಗಿಯೂ ಹೇಳಿಕೊಂಡಿದ್ದಾನೆ. ಆರೋಪಿಯು ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಲೇ ಇದ್ದಾನೆ ಮತ್ತು ಆತನ ಹೇಳಿಕೆಗಳು ನಿಜವೇ ಎಂಬುದನ್ನು ನಾವಿನ್ನು ಪತ್ತೆಹಚ್ಚಬೇಕಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ತನಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿವೆ ಮತ್ತು ಊಟದ ನಂತರ ಶೌಚಾಲಯವನ್ನು ಬಳಸಬೇಕು. ಘಟನೆಯ ದಿನ, ಅಲ್ಲಿ ಯಾರೂ ಇಲ್ಲದ ಕಾರಣ ಏನನ್ನೋ ತಿಂದು ಕಾಲೇಜಿನಲ್ಲಿ ಮಹಿಳಾ ಶೌಚಾಲಯಕ್ಕೆ ಬಂದಿದ್ದೆ. ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸುವ ಯಾವುದೇ ಉದ್ದೇಶವಿಲ್ಲ ಮತ್ತು ಆಕೆಯ ಬಾಯಿ ಮುಚ್ಚುವ ಮೂಲಕ ಕಿರುಕುಚುವುದನ್ನು ತಡೆಯಲು ಯತ್ನಿಸಿದೆ ಎಂದು ಆರೋಪಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜನವರಿ 10 ರಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ, ಕುಮಾರ್ ಅವರು ವಿದ್ಯಾರ್ಥಿನಿಯನ್ನು ವಾಶ್ ರೂಂನ ಗೋಡೆಗೆ ತಳ್ಳಿದ್ದರು ಮತ್ತು ಬೀಗ ಹಾಕಿದ್ದರು ಎಂದು ಆರೋಪಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿ ಕಾಲೇಜು ಆವರಣದ ಹೊರಗೆ ಓಡಿಹೋಗುವುದನ್ನು ಸೆರೆಹಿಡಿದಿದೆ. 19 ವರ್ಷದ ಯುವತಿ ಮೂರನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿನಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT