ಏರೊ ಇಂಡಿಯಾ ಶೋಗೆ ಸಂಬಂಧಿಸಿ ಆಯೋಜನೆಯಾದ ಸಭೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ರಾಜ್ಯ

'ಏರೋ ಇಂಡಿಯಾ ಈ ಬಾರಿ ಅತಿದೊಡ್ಡ ಏರ್ ಶೋ ಆಗಲಿದೆ': ಸಿಎಂ ಬಸವರಾಜ ಬೊಮ್ಮಾಯಿ

ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 13 ರಿಂದ 17 ರವರೆಗೆ ನಡೆಯಲಿರುವ ಏರೋ ಇಂಡಿಯಾ ಶೋದ 14 ನೇ ಆವೃತ್ತಿಯು ಅತಿ ಹೆಚ್ಚು ಜನರ ಭಾಗವಹಿಸುವಿಕೆಯ ಮೂಲಕ "ಅತಿದೊಡ್ಡ ವೈಮಾನಿಕ ಪ್ರದರ್ಶನ" ಎನಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ಕಲಬುರಗಿ: ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 13 ರಿಂದ 17 ರವರೆಗೆ ನಡೆಯಲಿರುವ ಏರೋ ಇಂಡಿಯಾ ಶೋದ 14ನೇ ಆವೃತ್ತಿಯು ಅತಿ ಹೆಚ್ಚು ಜನರ ಭಾಗವಹಿಸುವಿಕೆಯ ಮೂಲಕ "ಅತಿದೊಡ್ಡ ವೈಮಾನಿಕ ಪ್ರದರ್ಶನ" ಎನಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ 'ಅಪೆಕ್ಸ್ ಕಮಿಟಿ' ಸಭೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಕಲಬುರಗಿಯಿಂದ ಭಾಗವಹಿಸಿದ್ದರು. 

ಅತಿ ಹೆಚ್ಚು ಜನರು ಭಾಗವಹಿಸುವಿಕೆಯೊಂದಿಗೆ ಅತಿ ದೊಡ್ಡ ಏರ್ ಶೋ ಆಗಲಿದೆ. ಪ್ರತಿನಿಧಿಗಳು, ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮದ ಪ್ರಮುಖರು ಮತ್ತು ಕಂಪನಿಗಳಿಂದ ಹೆಚ್ಚಿನ ಸಂಖ್ಯೆಯ ಭಾಗವಹಿಸುವಿಕೆ ಇರುತ್ತದೆ ಎಂದು ಹೇಳಿದರು. 

ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಂಡಿಯಾ ಪೆವಿಲಿಯನ್, ಕರ್ನಾಟಕ ಪೆವಿಲಿಯನ್ ಹಾಗೂ ಏರೋಸ್ಪೇಸ್ ಕಂಪನಿಗಳ ಬೃಹತ್ ಪ್ರದರ್ಶನ ಏರ್ ಶೋದಲ್ಲಿ ನಡೆಯಲಿದೆ. ಅಲ್ಲದೆ ವಿಮಾನಗಳ ಮೂಲಕ ವೈಮಾನಿಕ ಪ್ರದರ್ಶನಗಳು ಇರುತ್ತವೆ. ಸಾರ್ವಜನಿಕರಿಗೆ ವೀಕ್ಷಿಸಲು ಅವಕಾಶವಿದೆ ಎಂದರು.

ಪ್ರಧಾನಿ ಮೋದಿ ಉದ್ಘಾಟನೆ: ಈ ಮೆಗಾ ಏರ್ ಶೋವನ್ನು ಪ್ರಧಾನಿ ಮೋದಿ ಫೆಬ್ರವರಿ 13ರಂದು ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ದ್ವೈವಾರ್ಷಿಕ ವೈಮಾನಿಕ ಪ್ರದರ್ಶನ ನಡೆಯಲಿದೆ.

ಏರೋ ಇಂಡಿಯಾ ವೆಬ್‌ಸೈಟ್ ಪ್ರಕಾರ, ಒಟ್ಟು 731 ಪ್ರದರ್ಶಕರು ನೋಂದಾಯಿಸಿಕೊಂಡಿದ್ದಾರೆ, ಅದರಲ್ಲಿ 633 ಭಾರತೀಯ ಮತ್ತು 98 ವಿದೇಶಿ ಪ್ರದರ್ಶಕರಾಗಿದ್ದಾರೆ. 

ಏರೋ ಇಂಡಿಯಾ 1996 ರಿಂದ ಬೆಂಗಳೂರಿನಲ್ಲಿ ಆಯೋಜಿಸಲಾದ 13 ಯಶಸ್ವಿ ಆವೃತ್ತಿಗಳೊಂದಿಗೆ ಪ್ರಧಾನ ಏರೋಸ್ಪೇಸ್ ಪ್ರದರ್ಶನಗಳಲ್ಲಿ ಒಂದಾಗಿ ಜಾಗತಿಕವಾಗಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT