ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾರಿನ ಮೇಲೆ ಬಿದ್ದ ನಮ್ಮ ಮೆಟ್ರೊ ಬ್ಯಾರಿಕೇಡ್, ಅಪಾಯದಿಂದ ಪ್ರಯಾಣಿಕರು ಪಾರು

ಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಮತ್ತೊಂದು ಘಟನೆ ವರದಿಯಾಗಿದ್ದು, ನಾಲ್ಕು ಚಕ್ರದ ವಾಹನದ ಮೇಲೆ ಬ್ಯಾರಿಕೇಡ್ ಬಿದ್ದು, ಕುಟುಂಬ ಸದಸ್ಯರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಹಾನಿಯಾಗಿದ್ದು, ಚಾಲಕ ಸಂತೋಷ್ ಕುಮಾರ್ ಸೇರಿದಂತೆ ಕಾರಿನಲ್ಲಿದ್ದವರು ಸುರಕ್ಷಿತವಾಗಿದ್ದಾರೆ.

ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಮತ್ತೊಂದು ಘಟನೆ ವರದಿಯಾಗಿದ್ದು, ನಾಲ್ಕು ಚಕ್ರದ ವಾಹನದ ಮೇಲೆ ಬ್ಯಾರಿಕೇಡ್ ಬಿದ್ದು, ಕುಟುಂಬ ಸದಸ್ಯರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಹಾನಿಯಾಗಿದ್ದು, ಚಾಲಕ ಸಂತೋಷ್ ಕುಮಾರ್ ಸೇರಿದಂತೆ ಕಾರಿನಲ್ಲಿದ್ದವರು ಸುರಕ್ಷಿತವಾಗಿದ್ದಾರೆ.

ಬೆಂಗಳೂರಿನ ಹೊರ ವರ್ತುಲ ರಸ್ತೆಯ ಮಹದೇವಪುರ ಬಳಿಯ ದೊಡ್ಡನೆಕ್ಕುಂದಿ ಜಂಕ್ಷನ್‌ನಲ್ಲಿ ಶನಿವಾರ ಸಂತೋಷ್ ಕುಮಾರ್ ಕುಟುಂಬ ಸಮೇತ ಮನೆಗೆ ತೆರಳುತ್ತಿದ್ದಾಗ ಮೆಟ್ರೊ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ್ದ ಬ್ಯಾರಿಕೇಡ್‌ನಿಂದ ಅಪಘಾತ ಸಂಭವಿಸಿದೆ.

ಮೂಲಗಳ ಪ್ರಕಾರ, ಕಾರ್ತಿಕ್ ನಗರವನ್ನು ದಾಟಿ ಕೆಆರ್ ಪುರಂ ಕಡೆಗೆ ಚಲಿಸುತ್ತಿದ್ದಾಗ ರಸ್ತೆಯ ಬ್ಲಾಕ್ ಕಾರಿನ ಮೇಲೆ ಬಿದ್ದು, ಕಾರು ಜಖಂಗೊಂಡಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ ಎಂದು ಹೇಳಿದರು. 

ಬೆಂಗಳೂರಿನಲ್ಲಿ ನಿರ್ಮಾಣ ಸ್ಥಳದಲ್ಲಿ ಈ ತಿಂಗಳು ಸಂಭವಿಸಿದ ಮೂರನೇ ಅವಘಡ ಇದಾಗಿದೆ.

ಮೊನ್ನೆ ಜನವರಿ 10 ರಂದು ಬೆಂಗಳೂರಿನ ಹೊರ ವರ್ತುಲ ರಸ್ತೆಯ ನಾಗವಾರ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿದು ಮಹಿಳೆ ಮತ್ತು ಆಕೆಯ ಪುಟ್ಟ ಮಗ ಸಾವಿಗೀಡಾಗಿದ್ದರು. ಮಹಿಳೆಯ ಪತಿ ಮತ್ತು ಮಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಎರಡು ದಿನಗಳ ನಂತರ ಜನವರಿ 12 ರಂದು, ಬ್ರಿಗೇಡ್ ರಸ್ತೆಯ ಮೆಟ್ರೋ ನಿರ್ಮಾಣದ ಸ್ಥಳದ ಬಳಿ ಟ್ರಿನಿಟಿ ಸರ್ಕಲ್‌ನಿಂದ ಶಿವಾಜಿನಗರ ಮಾರ್ಗದ ಬಳಿ ರಸ್ತೆಯು ಹಠಾತ್ ಕುಸಿದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್