ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡ ಸ್ಮಾರ್ಟ್‌ವಾಚ್‌ಗಳು 
ರಾಜ್ಯ

ಬೆಂಗಳೂರು: ದರೋಡೆ ಮಾಡಿದ್ದ ಇಬ್ಬರ ಬಂಧನ, 57 ಲಕ್ಷ ರೂ. ಮೌಲ್ಯದ ಸ್ಮಾರ್ಟ್‌ವಾಚ್‌ಗಳ ವಶ

ಕೊರಿಯರ್ ಏಜೆನ್ಸಿಯೊಂದರ ಸಿಬ್ಬಂದಿ ಮೇಲೆ ದಾಳಿ ನಡೆಸಿ ದರೋಡೆ ಮಾಡಿದ್ದ ಇಬ್ಬರನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದು, ಇಬ್ಬರಿಂದ ಸುಮಾರು 57 ಲಕ್ಷ ರೂ. ಮೌಲ್ಯದ 1,283 ಟೈಟಾನ್ ಸ್ಮಾರ್ಟ್ ವಾಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಕೊರಿಯರ್ ಏಜೆನ್ಸಿಯೊಂದರ ಸಿಬ್ಬಂದಿ ಮೇಲೆ ದಾಳಿ ನಡೆಸಿ ದರೋಡೆ ಮಾಡಿದ್ದ ಇಬ್ಬರನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದು, ಇಬ್ಬರಿಂದ ಸುಮಾರು 57 ಲಕ್ಷ ರೂ.  ಮೌಲ್ಯದ 1,283 ಟೈಟಾನ್ ಸ್ಮಾರ್ಟ್ ವಾಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರು ಮತ್ತು ಮೂರು ಬೈಕ್‌ಗಳಲ್ಲಿ ಬರುತ್ತಿದ್ದ ದುಷ್ಕರ್ಮಿಗಳ ಬೈಕ್‌ವೊಂದಕ್ಕೆ ಟೆಂಪೋ ಟಚ್ ಆಗಿತ್ತು.  ಇದರಿಂದ ಅಸಮಾನಧಾನಗೊಂಡ ಆರೋಪಿಗಳು ಜಗಳ ಆರಂಭಿಸಿದ್ದರು. ಸ್ಮಾರ್ಟ್‌ವಾಚ್‌ಗಳನ್ನು ತುಂಬಿದ್ದ ವಾಹನವನ್ನು ಹಿಂಬಾಲಿಸಿ ಆರ್.ಆರ್. ನಗರದ ಜವರೇಗೌಡನ ದೊಡ್ಡಿ ರಸ್ತೆಯ ಮಹಾರಾಜ ಬಾರ್ ಬಳಿ ತಡೆದಿದ್ದಾರೆ. ಟೆಂಪೋದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ ನಡೆಸ, ವಾಚ್ ತುಂಬಿದ್ದ ವಾಹನದೊಂದಿಗೆ ಪರಾರಿಯಾಗಿದ್ದರು.

ಈ ಬಗ್ಗೆ ಕೊರಿಯರ್ ಏಜೆನ್ಸಿಯ ಮ್ಯಾನೇಜರ್ ಆರ್ ಆರ್ ನಗರ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳಾದ ಜಮೀರ್ ಅಹ್ಮದ್ ಅಲಿಯಾಸ್ ಜಮೀರ್ (28) ಮತ್ತು ಸೈಯದ್ ಶಾಹಿದ್ ಅಲಿಯಾಸ್ ಶಾಹಿದ್ (26) 23 ಬಾಕ್ಸ್‌ಗಳಲ್ಲಿ ತುಂಬಿದ್ದ ವಾಚ್‌ಗಳನ್ನು ತೆಗೆದುಕೊಂಡು ಪರಾರಿಯಾಗಿದ್ದರು. ಅವರ ಸಹಾಯಕರು ತಲೆಮರೆಸಿಕೊಂಡಿದ್ದಾರೆ. ಜನವರಿ 15 ರಂದು ಈ ಘಟನೆ ನಡೆದಿದೆ. ಸಂತ್ರಸ್ತರನ್ನು ಜಾನ್ (22) ಮತ್ತು ಬಿಸಲ್ ಕಿಸಾನ್ (21) ಎಂದು ಗುರುತಿಸಲಾಗಿದೆ. ಇವರಿಬ್ಬರು ಆರ್‌ಆರ್ ನಗರದ ಜೈದೀಪ್ ಎಂಟರ್‌ಪ್ರೈಸಸ್ ಕೊರಿಯರ್ ಏಜೆನ್ಸಿಯ ಉದ್ಯೋಗಿಗಳು.

ಕೋಲಾರ ಜಿಲ್ಲೆಯ ಮಾಲೂರಿನಲ್ಲಿರುವ ಇ-ಕಾಮರ್ಸ್ ಕಂಪನಿಯ ಗೋದಾಮಿನಿಂದ ವಾಚ್‌ಗಳು ಬಂದಿದ್ದವು. ಕೊರಿಯರ್ ಏಜೆನ್ಸಿಯು ವಾಚ್‌ಗಳನ್ನು ನಗರದ ಗ್ರಾಹಕರಿಗೆ ತಲುಪಿಸಬೇಕಾಗಿತ್ತು. ವಾಹನದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಾಚ್​ಗಳನ್ನು ತೆಗೆದುಕೊಂಡು ಬೇರೆಡೆ ಸಾಗಾಟ ಮಾಡಿದ್ದರು. ಬಳಿಕ ಟೆಂಪೋವನ್ನು ಅದೇ ಜಾಗದಲ್ಲಿ ಬಿಟ್ಟು ತಲೆಮರೆಸಿಕೊಂಡಿದ್ದರು. 

ಆರ್‌ಆರ್ ನಗರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ಯನು ಬಂಧಿಸಿ ವಾಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT