ಆಲಮಟ್ಟಿ ಜಲಾಶಯ 
ರಾಜ್ಯ

ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಹೂಳು ಸಂಗ್ರಹ: ತಜ್ಞರಿಂದ ಅಧ್ಯಯನ

ಜಲಾಶಯಗಳಲ್ಲಿ ಹೂಳು ಶೇಖರಣೆಯಾಗುತ್ತಿದ್ದು, ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ವಿಜಯಪುರ: ಜಲಾಶಯಗಳಲ್ಲಿ ಹೂಳು ಶೇಖರಣೆಯಾಗುತ್ತಿದ್ದು, ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆಲಮಟ್ಟಿ ಅಣೆಕಟ್ಟಿನ ಹಿನ್ನೀರಿನಲ್ಲಿ ಸಂಗ್ರಹವಾಗಿರುವ ಹೂಳಿನ ಪ್ರಮಾಣವನ್ನು ಅಳೆಯಲು ರಾಜ್ ಸರ್ಕಾರವು ಕರ್ನಾಟಕ ಎಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಮೂಲಕ ಅಧ್ಯಯನ ನಡೆಸಲು ಮುಂದಾಗಿದೆ.

ಸರ್ಕಾರದ ಆದೇಶದಂತೆ ಈಗಾಗಲೇ ಅಧಿಕಾರಿಗಳು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಅಧ್ಯಯನ ಕಾರ್ಯ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಮಂಗಳೂರಿನಿಂದ ನಮ್ಮ ಬೋಟ್‌ಗಳು ಬಂದಿದ್ದು, ಆಧುನಿಕ ಯಂತ್ರಗಳನ್ನು ಬಳಸಿ ಅಧ್ಯಯನ ನಡೆಸುತ್ತಿದ್ದೇವೆ ಎಂದು ಕರ್ನಾಟಕ ಎಂಜಿನಿಯರಿಂಗ್ ಸಂಶೋಧನಾ ಕೇಂದ್ರದ ನಿರ್ದೇಶಕ ಕೆ ಜಿ ಮಹೇಶ್ ಅವರು ತಿಳಿಸಿದ್ದಾರೆ.

ಸರ್ಕಾರದ ನಿಯಮಾವಳಿಯಂತೆ ಪ್ರತಿ 10 ವರ್ಷಗಳಿಗೊಮ್ಮೆ ಅಣೆಕಟ್ಟುಗಳಲ್ಲಿ ಇಂತಹ ಅಧ್ಯಯನವನ್ನು ನಡೆಸಬೇಕು. ಇದು ಅಣೆಕಟ್ಟಿನಲ್ಲಿ ಸಂಗ್ರಹವಾಗುವ ನೀರಿನ ಪ್ರಮಾಣವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಆಲಮಟ್ಟಿ ಅಣೆಕಟ್ಟಿನ ಹಿನ್ನೀರು ಸುಮಾರು 487 ಚ.ಕಿ.ಮೀ ವ್ಯಾಪ್ತಿಯನ್ನು ಹೊಂದಿದ್ದು, ಅಧಿಕಾರಿಗಳು ಸಂಪೂರ್ಣ ಅಧ್ಯಯನವನ್ನು ನಡೆಸಲಿದ್ದಾರೆಂದು ಹೇಳಿದರು.

ಬಳಿಕ ಅಧ್ಯಯನದ ವಿಧಾನವನ್ನು ವಿವರಿಸಿದ ಅಧಿಕಾರಿಗಳು, ಹಿನ್ನೀರಿನ ಪ್ರದೇಶವನ್ನು ಮೊದಲು ವಿವಿಧ ವಿಭಾಗಗಳಾಗಿ ವಿಂಗಡಿಸಲಾಗುತ್ತದೆ. ಡ್ರೋನ್‌ಗಳನ್ನು ಬಳಸಿಕೊಂಡು ವೈಮಾನಿಕ ಸಮೀಕ್ಷೆಯ ಮೂಲಕ ಪ್ರತಿ ಪ್ರದೇಶವು ಸುಮಾರು 100 ಮೀ. ದೋಣಿಗಳಿಗೆ ಜೋಡಿಸಲಾದ ಎಕೋ ಸೌಂಡ್ ಸಿಸ್ಟಮ್ ಯಂತ್ರವನ್ನು ಹಿನ್ನೀರಿನ ಕೆಳಭಾಗಕ್ಕೆ ಧ್ವನಿ ತರಂಗಗಳನ್ನು ಕಳುಹಿಸಲು ಬಳಸಲಾಗುತ್ತದೆ. ನಂತರ, ಎಲ್ಲಾ ವಿಭಾಗಗಳಿಂದ ಸಂಗ್ರಹಿಸಿದ ವಿವರಗಳನ್ನು ಒಟ್ಟುಗೂಡಿಸಲಾಗುತ್ತದೆ. ಈ ಮೂಲಕ ನಿಖರವಾದ ಹೂಳು ಸಂಗ್ರಹಣೆಯ ಪ್ರಮಾಣವನ್ನು ಕಂಡುಹಿಡಿಯಲಾಗುತ್ತದೆ. ಆ ಮಾಹಿತಿ ಆಧರಿಸಿ ಹೂಳು ಶೇಖರಣೆ ತಡೆಗೆ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಅಧ್ಯಯನವು ಪೂರ್ಣಗೊಳ್ಳಲು ಸುಮಾರು ಮೂರು ತಿಂಗಳು ತೆಗೆದುಕೊಳ್ಳುತ್ತದೆ, ಅಧ್ಯಯನಕ್ಕಾಗಿ ಸುಮಾರು 1.8 ಕೋಟಿ ರೂಪಾಯಿ ಖರ್ಚು ವೆಚ್ಚ ಮಾಡಲಾಗುತ್ತಿದೆ. ಮಂಗಳೂರಿನ ಜಿಯೋಮರೀನ್ ಇಂಜಿನಿಯರಿಂಗ್ ಏಜೆನ್ಸಿ ಇದರ ಗುತ್ತಿಗೆ ಪಡೆದಿದೆ. ಜನಶಕ್ತಿ ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರ ಸರ್ಕಾರದ ರಾಷ್ಟ್ರೀಯ ಜಲವಿಜ್ಞಾನ ಯೋಜನೆಯಿಂದ ಈ ಹಣವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!