ದಯಾನಂದ ಜಿ ಕಥಲ್ಸರ್ ದೈವ ನರ್ತಕವಾಗಿ ಪ್ರದರ್ಶನ ನೀಡುತ್ತಿದ್ದಾರೆ. (ಫೋಟೋ | ಎಕ್ಸ್‌ಪ್ರೆಸ್) 
ರಾಜ್ಯ

ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ; ಎರಡು ತಿಂಗಳು ಕಳೆದರೂ ಬಿಡುಗಡೆಯಾಗದ ಯಾವುದೇ ಮಾರ್ಗಸೂಚಿ

ಕನ್ನಡದ ಬ್ಲಾಕ್‌ಬಸ್ಟರ್ ಸಿನಿಮಾ ‘ಕಾಂತಾರ’ ದೇಶದಾದ್ಯಂತ ‘ದೈವರಾಧನೆ’ಯನ್ನು ಜನಪ್ರಿಯಗೊಳಿಸಿದ ನಂತರ, ರಾಜ್ಯ ಸರ್ಕಾರವು ಅಕ್ಟೋಬರ್‌ನಲ್ಲಿ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ₹ 2,000 ಮಾಸಾಶನ ನೀಡಲು ರಾಜ್ಯ ಸರ್ಕಾರ ಘೋಷಿಸಿತು. ಅದಾಗಿ ಎರಡು ತಿಂಗಳು ಕಳೆದಿದ್ದರೂ, ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳು ಇನ್ನೂ ಹೊರಬಂದಿಲ್ಲ. 

ಮಂಗಳೂರು: ಕನ್ನಡದ ಬ್ಲಾಕ್‌ಬಸ್ಟರ್ ಸಿನಿಮಾ ‘ಕಾಂತಾರ’ ದೇಶದಾದ್ಯಂತ ‘ದೈವರಾಧನೆ’ಯನ್ನು ಜನಪ್ರಿಯಗೊಳಿಸಿದ ನಂತರ, ರಾಜ್ಯ ಸರ್ಕಾರವು ಅಕ್ಟೋಬರ್‌ನಲ್ಲಿ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ₹ 2,000 ಮಾಸಾಶನ ನೀಡಲು ರಾಜ್ಯ ಸರ್ಕಾರ ಘೋಷಿಸಿತು. ಅದಾಗಿ ಎರಡು ತಿಂಗಳು ಕಳೆದಿದ್ದರೂ, ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳು ಇನ್ನೂ ಹೊರಬಂದಿಲ್ಲ. ಸರಿಯಾದ ಮಾಹಿತಿ ಲಭ್ಯವಾಗದ ಕಾರಣ ಫಲಾನುಭವಿಗಳ ವಿವರ ಸಂಗ್ರಹಿಸುವುದು ಕಷ್ಟಕರವಾಗಿದೆ ಎನ್ನುತ್ತಾರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು.

ಸದ್ಯ ದೈವ ನರ್ತಕರನ್ನು ಜಾನಪದ ಕಲಾವಿದರ ಪಟ್ಟಿಯಲ್ಲಿ ಸೇರಿಸಲಾಗಿದೆ. ಆದರೆ, ಅವರ ಬಗ್ಗೆ ಪ್ರತ್ಯೇಕ ಸಮೀಕ್ಷೆ ನಡೆದಿಲ್ಲ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರ್ಕಾರ ಸರಳಗೊಳಿಸಬೇಕಾಗಿದ್ದು, ಈ ಕಾರಣದಿಂದಾಗಿ ದಕ್ಷಿಣ ಕನ್ನಡದ ಇಬ್ಬರು ಮಾತ್ರ ಅರ್ಜಿ ಸಲ್ಲಿಸಿದ್ದಾರೆ ಎಂದು ದೈವ ನರ್ತಕರೊಬ್ಬರು ಹೇಳಿದರು. 

ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ದೈವಾರಾಧನೆ ನಿರೂಪಕ ದಯಾನಂದ ಜಿ ಕತಲಸರ್ ಮಾತನಾಡಿ, ಕರಾವಳಿಯಲ್ಲಿ 60 ವರ್ಷ ದಾಟಿದ ಕೇವಲ 1000 ಮಂದಿ ಮಾತ್ರ ದೈವಾರಾಧನೆ ನಡೆಸುತ್ತಿದ್ದು, ಗೌರವಧನವು ನಿರ್ಗತಿಕರಿಗೆ ಪ್ರಯೋಜನವಾಗಬೇಕಾದರೆ ವಯೋಮಿತಿಯನ್ನು ಕನಿಷ್ಠ 55ಕ್ಕೆ ಇಳಿಸಬೇಕು ಎಂದು ಹೇಳಿದರು.

ಈಗಾಗಲೇ ಅನೇಕ ಕಲಾವಿದರು ವೃದ್ಧಾಪ್ಯ ವೇತನ (ಸಂಧ್ಯಾ ಸುರಕ್ಷಾ) ಪಡೆಯುತ್ತಿದ್ದು, ಈ ಹೊಸ ಮಾಸಿಕ ಗೌರವಧನಕ್ಕೆ ಅರ್ಜಿ ಸಲ್ಲಿಸುವಂತಿಲ್ಲ. ಅವರು ಇದನ್ನು ಪಡೆಯಬೇಕಾದರೆ, ತಮ್ಮ ಸದ್ಯದ ಪಿಂಚಣಿಯನ್ನು (ರೂ. 1,000) ರದ್ದುಗೊಳಿಸಬೇಕಾಗುತ್ತದೆ. ಆದರೆ, ಹಳೆಯ ಪಿಂಚಣಿ ರದ್ದುಪಡಿಸಿ ಹೊಸ ಯೋಜನೆಗೆ ಅರ್ಜಿ ಸಲ್ಲಿಸುವ ಈ ಪ್ರಕ್ರಿಯೆ ಜಟಿಲವಾಗಿದೆ.

ಎಲ್ಲಾ ಅರ್ಜಿದಾರರಿಗೆ ಮಾಸಿಕ ಗೌರವಧನ ನೀಡಲು ಸಾಕಷ್ಟು ಬಜೆಟ್ ಕೊರತೆ ಇದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹೆಚ್ಚಿನ ಜನರು ಅನಕ್ಷರಸ್ಥರು ಮತ್ತು ಬಡವರಾಗಿದ್ದು, ಯೋಜನೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಸುಲಭವಲ್ಲ. ಆದ್ದರಿಂದ, ಮಾಸಿಕ ಗೌರವಧನಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪಂಚಾಯತ್ ಅಥವಾ ಪಿಡಿಒ ಮಟ್ಟದಲ್ಲಿ ಮಾಡಬೇಕು. ಸಮಸ್ಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಅವರ ಗಮನಕ್ಕೆ ತಂದಿದ್ದು, ಅವರು ಪರಿಹರಿಸುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

ಈಮಧ್ಯೆ, ದೈವ ನರ್ತಕರ ಬಗ್ಗೆ ನಿರ್ದಿಷ್ಟ ಮಾಹಿತಿ ಲಭ್ಯವಿದೆ ಮತ್ತು ಅವರು ಇನ್ನೂ ಸರ್ಕಾರದಿಂದ ಮಾರ್ಗಸೂಚಿಗಳಿಗಾಗಿ ಕಾಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT