ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರ ಸಾವು 
ರಾಜ್ಯ

ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರ ಸಾವು

ಮಾಲ್ಗುಡಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಓರ್ವ ಮಹಿಳೆ ಹಾಗೂ ಓರ್ವ ವೃದ್ಧೆ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಮಂಡ್ಯ: ಮಾಲ್ಗುಡಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಓರ್ವ ಮಹಿಳೆ ಹಾಗೂ ಓರ್ವ ವೃದ್ಧೆ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಬುಧವಾರ ಬೆಳಗ್ಗೆ 9 ಗಂಟೆಗೆ ಮೈಸೂರಿನಿಂದ  ಮಂಡ್ಯಗೆ ಸಾವಿರಾರು ಜನರನ್ನು ಹೊತ್ತು ಬಂದ ಮಾಲ್ಗುಡಿ ಎಕ್ಸ್‌ಪ್ರೆಸ್‌ ರೈಲು ಇಬ್ಬರು ಪ್ರಾಣ ಪಕ್ಷಿಯನ್ನು ಹಾರಿಸಿದೆ. ಓರ್ವ ಮಹಿಳೆ ಹಾಗೂ ಓರ್ವ ವೃದ್ಧೆ ಬೆಂಗಳೂರಿನಿಂದ ರೈಲಿನಲ್ಲಿ ಬಂದಿಳಿದು ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಪೇಟೆ ಬೀದಿಯ ರೈಲ್ವೆ ಜಂಕ್ಷನ್‌ ದಾಟುವ ವೇಳೆ ಮಾಲ್ಗುಡಿ ಎಕ್ಸ್‌ಪ್ರೆಸ್‌ ವೇಗವಾಗಿ ಬಂದಿದೆ. ಇದನ್ನು ಕಂಡ ಜನರು ಇಬ್ಬರನ್ನು ಕೂಗಿಕೊಂಡಿದ್ದಾರೆ. ರೈಲು ಬರುವ ಶಬ್ಧಕ್ಕೆ ಜನರ ಕೂಗು ಆ ಇಬ್ಬರಿಗೆ ಕೇಳಿಲ್ಲ. ನಂತರ ರೈಲು ಬಂದು ಮಹಿಳೆ ಹಾಗೂ ವೃದ್ಧೆಯ ಮೇಲೆ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರೈಲಿಗೆ ಸಿಕ್ಕಿ ಸಾವನ್ನಪ್ಪಿದ ಮಹಿಳೆ ಮಂಡ್ಯದ ಬಸರಾಳು ಸಮೀಪದ ಹುರುಳಿಜವರನಕೊಪ್ಪಲು ಗ್ರಾಮದ ಶಶಿ ಎಂದು ತಿಳಿದುಬಂದಿದೆ. ಶಶಿ ಹಾಗೂ ಸಂಸಾರ ಬೆಂಗಳೂರಿನಲ್ಲಿ ವಾಸವಾಗಿದ್ದು, ಇಂದು ಬೆಂಗಳೂರಿನಿಂದ ಹುರುಳಿಜವರನಕೊಪ್ಪಲು ಗ್ರಾಮಕ್ಕೆ ಹೋಗಲು ರೈಲಿನಿಂದ ಮಂಡ್ಯಗೆ ಬಂದಿದ್ದಾರೆ. ಈ ವೇಳೆ ರೈಲ್ವೆ ಹಳಿಯನ್ನು ದಾಟುವಾಗ ಈ ಅವಘಡ ಜರುಗಿದೆ. ಇನ್ನೂ ಸಾವನ್ನಪ್ಪಿರುವ ವೃದ್ಧೆಯ ತಲೆ ನಜ್ಜುಗುಜ್ಜು ಆಗಿರುವ ಕಾರಣ ಆಕೆಯ ಗುರುತು ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT