ಮಹಾತೇಂಶ್ ಸಾವು 
ರಾಜ್ಯ

74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದ ಸ್ಟಾಫ್ ನರ್ಸ್, ಹೃದಯಾಘಾತದಿಂದ ಸಾವು!

74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಸ್ಟಾಫ್ ನರ್ಸ್ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ರಾಯಚೂರು: 74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಸ್ಟಾಫ್ ನರ್ಸ್ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. 

ಮೃತ ಸ್ಟಾಫ್ ನರ್ಸ್ 42 ವರ್ಷದ ಮಹಾಂತೇಶ್ ಎಂದು ತಿಳಿದುಬಂದಿದೆ. ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದ ನಿವಾಸಿಯಾಗಿರುವ ಮಹಾಂತೇಶ್ ಅವರು 74ನೇ ಗಣರಾಜ್ಯೋತ್ಸವ ಹಿನ್ನೆಲೆ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ವೇಳೆ ತಂಡದ ಜತೆ ನೃತ್ಯ ಮಾಡುತ್ತಿದ್ದಾಗ ಮಹಾಂತೇಶ್ ಏಕಾಏಕಿ ಕುಸಿದುಬಿದ್ದಿದ್ದರು. ಈ ವೇಳೆ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 

ಮಹಾಂತೇಶ್ ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.​ ರಾಯಚೂರು ಸಿಂಧನೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT