ಮಡಿಕೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್. 
ರಾಜ್ಯ

ಅಮೃತ ಗ್ರಾಮೀಣ ವಸತಿ ಯೋಜನೆಯಿಂದ ಕೊಡಗು ನಿರಾಶ್ರಿತರಿಗೆ ಸೂರು: ಬಿ.ಸಿ.ನಾಗೇಶ್

ಕೊಡಗು ಜಿಲ್ಲೆಯ ಒಟ್ಟು 12 ಗ್ರಾ.ಪಂ.ಗಳನ್ನು ಅಮೃತ ಗ್ರಾಮ ಪಂಚಾಯಿತಿ ಎಂದು ಗುರುತಿಸಲಾಗಿದ್ದು, ಈ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಹಂತದಲ್ಲಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು.

ಮಡಿಕೇರಿ: ಕೊಡಗು ಜಿಲ್ಲೆಯ ಒಟ್ಟು 12 ಗ್ರಾ.ಪಂ.ಗಳನ್ನು ಅಮೃತ ಗ್ರಾಮ ಪಂಚಾಯಿತಿ ಎಂದು ಗುರುತಿಸಲಾಗಿದ್ದು, ಈ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಹಂತದಲ್ಲಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು.

ಮಡಿಕೇರಿಯ ಜಿಲ್ಲಾ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾರತ ಧ್ವಜಾರೋಹಣ ನೆರವೇರಿಸಿ ನಾಗೇಶ್ ಅವರು ಮಾತನಾಡಿದರು.

ವಸತಿ ರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಮೃತ ಗ್ರಾಮೀಣ ವಸತಿ ಯೋಜನೆ ಜಾರಿಗೊಳಿಸಲಾಗುತ್ತಿದೆ’ ಎಂದು ಹೇಳಿದರು.

ಬಳಿಕ ದೇಶದ ಇತಿಹಾಸದ ಬಗ್ಗೆ ಮಾತನಾಡಿ ಭಾರತೀಯ ಸಂವಿಧಾನವನ್ನು ರಚಿಸುವಲ್ಲಿ ನಾಯಕರ ಕೊಡುಗೆಗಳನ್ನು ಸ್ಮರಿಸಿದರು. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಕೊಂಡಾಡಿದರು.

ರೈತರ ಜೀವನಶೈಲಿಯನ್ನು ಉತ್ತೇಜಿಸಲು ವಿಶೇಷ ಯೋಜನೆಗಳೊಂದಿಗೆ ವಿಸ್ತರಿಸಲಾಗುತ್ತಿದೆ ಎಂದು ವಿವರಿಸಿದರು.

“ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟವನ್ನು ಉತ್ತೇಜಿಸಲು ಅಮೃತ ರೈತ ಉತ್ಪಾದಕರ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತಿದೆ. ಈ ಸಂಸ್ಥೆಗಳಿಗೆ ಮೂರು ವರ್ಷಗಳ ಅವಧಿಯಲ್ಲಿ ತಲಾ 30 ಲಕ್ಷ ಅನುದಾನ ನೀಡಲಾಗುವುದು. ಪ್ರಸ್ತುತ ಸರಕಾರ ಕೊಡಗು ಜಿಲ್ಲೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಈ ನಿಟ್ಟಿನಲ್ಲಿ ಕುಶಾಲನಗರದ ಚಿಕ್ಕ ಆಳುವಾರದಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ’ ಎಂದು ಹೇಳಿದರು.

ನೂತನ ನ್ಯಾಯಾಲಯ ಕಟ್ಟಡ ಸ್ಥಾಪನೆ ಸೇರಿದಂತೆ ಜಿಲ್ಲೆಯಲ್ಲಿ ಇತ್ತೀಚೆಗೆ ಕೈಗೊಂಡಿರುವ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಕುರಿತು ಸಚಿವರು ಮಾಹಿತಿ ನೀಡಿದರು.

''ಜಿಲ್ಲೆಯಲ್ಲಿ 198 ಲಕ್ಷ ರೂ.ವೆಚ್ಚದಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. 5 ಕೋಟಿ ವೆಚ್ಚದಲ್ಲಿ ಮಿನಿ ತಾರಾಲಯ ಮತ್ತು 4 ಕೋಟಿ ರೂ.ನಲ್ಲಿ ವಿಜ್ಞಾನ ಕೇಂದ್ರ ಬರಲಿದೆ. ಗಾಂಧಿ ಮೈದಾನದ 30 ಸೆಂಟ್ಸ್ ಜಾಗದಲ್ಲಿ ಮಹಾತ್ಮಗಾಂಧಿ ಪಾರ್ಕ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ತಿಳಿಸಿದರು

ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆಯಡಿ 5,189 ವಿದ್ಯಾರ್ಥಿಗಳಿಗೆ ಒಟ್ಟು 209.98 ಲಕ್ಷ ರೂ.ಗಳನ್ನು ನೀಡಲಾಗಿದೆ. ಜಿಲ್ಲೆಯಾದ್ಯಂತ ಮಳೆಯಿಂದ ಹಾನಿಗೊಳಗಾದ ವಿವಿಧ ರಸ್ತೆಗಳು ಮತ್ತು ಸೇತುವೆಗಳ ಪರಿಹಾರ ಕಾರ್ಯಗಳನ್ನು ನಡೆಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಎನ್‌ಡಿಆರ್‌ಎಫ್ ಯೋಜನೆಯಡಿ ಜಿಲ್ಲೆಯ 46,099 ರೈತರಿಗೆ ಈ ವರ್ಷದ ಬೆಳೆ ನಷ್ಟಕ್ಕೆ 133.26 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೊಡಗಿನ ಪದ್ಮಶ್ರೀ ಪುರಸ್ಕೃತ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಶಾಸಕ ಅಪ್ಪಚ್ಚು ರಂಜನ್, ಡಿಸಿ ಡಾ.ಬಿ.ಸಿ.ಸತೀಶ, ಎಸ್ಪಿ ಎಂ.ಎ.ಅಯ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT