ಮಡಿಕೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್. 
ರಾಜ್ಯ

ಅಮೃತ ಗ್ರಾಮೀಣ ವಸತಿ ಯೋಜನೆಯಿಂದ ಕೊಡಗು ನಿರಾಶ್ರಿತರಿಗೆ ಸೂರು: ಬಿ.ಸಿ.ನಾಗೇಶ್

ಕೊಡಗು ಜಿಲ್ಲೆಯ ಒಟ್ಟು 12 ಗ್ರಾ.ಪಂ.ಗಳನ್ನು ಅಮೃತ ಗ್ರಾಮ ಪಂಚಾಯಿತಿ ಎಂದು ಗುರುತಿಸಲಾಗಿದ್ದು, ಈ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಹಂತದಲ್ಲಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು.

ಮಡಿಕೇರಿ: ಕೊಡಗು ಜಿಲ್ಲೆಯ ಒಟ್ಟು 12 ಗ್ರಾ.ಪಂ.ಗಳನ್ನು ಅಮೃತ ಗ್ರಾಮ ಪಂಚಾಯಿತಿ ಎಂದು ಗುರುತಿಸಲಾಗಿದ್ದು, ಈ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಹಂತದಲ್ಲಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು.

ಮಡಿಕೇರಿಯ ಜಿಲ್ಲಾ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾರತ ಧ್ವಜಾರೋಹಣ ನೆರವೇರಿಸಿ ನಾಗೇಶ್ ಅವರು ಮಾತನಾಡಿದರು.

ವಸತಿ ರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಮೃತ ಗ್ರಾಮೀಣ ವಸತಿ ಯೋಜನೆ ಜಾರಿಗೊಳಿಸಲಾಗುತ್ತಿದೆ’ ಎಂದು ಹೇಳಿದರು.

ಬಳಿಕ ದೇಶದ ಇತಿಹಾಸದ ಬಗ್ಗೆ ಮಾತನಾಡಿ ಭಾರತೀಯ ಸಂವಿಧಾನವನ್ನು ರಚಿಸುವಲ್ಲಿ ನಾಯಕರ ಕೊಡುಗೆಗಳನ್ನು ಸ್ಮರಿಸಿದರು. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಕೊಂಡಾಡಿದರು.

ರೈತರ ಜೀವನಶೈಲಿಯನ್ನು ಉತ್ತೇಜಿಸಲು ವಿಶೇಷ ಯೋಜನೆಗಳೊಂದಿಗೆ ವಿಸ್ತರಿಸಲಾಗುತ್ತಿದೆ ಎಂದು ವಿವರಿಸಿದರು.

“ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟವನ್ನು ಉತ್ತೇಜಿಸಲು ಅಮೃತ ರೈತ ಉತ್ಪಾದಕರ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತಿದೆ. ಈ ಸಂಸ್ಥೆಗಳಿಗೆ ಮೂರು ವರ್ಷಗಳ ಅವಧಿಯಲ್ಲಿ ತಲಾ 30 ಲಕ್ಷ ಅನುದಾನ ನೀಡಲಾಗುವುದು. ಪ್ರಸ್ತುತ ಸರಕಾರ ಕೊಡಗು ಜಿಲ್ಲೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಈ ನಿಟ್ಟಿನಲ್ಲಿ ಕುಶಾಲನಗರದ ಚಿಕ್ಕ ಆಳುವಾರದಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ’ ಎಂದು ಹೇಳಿದರು.

ನೂತನ ನ್ಯಾಯಾಲಯ ಕಟ್ಟಡ ಸ್ಥಾಪನೆ ಸೇರಿದಂತೆ ಜಿಲ್ಲೆಯಲ್ಲಿ ಇತ್ತೀಚೆಗೆ ಕೈಗೊಂಡಿರುವ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಕುರಿತು ಸಚಿವರು ಮಾಹಿತಿ ನೀಡಿದರು.

''ಜಿಲ್ಲೆಯಲ್ಲಿ 198 ಲಕ್ಷ ರೂ.ವೆಚ್ಚದಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. 5 ಕೋಟಿ ವೆಚ್ಚದಲ್ಲಿ ಮಿನಿ ತಾರಾಲಯ ಮತ್ತು 4 ಕೋಟಿ ರೂ.ನಲ್ಲಿ ವಿಜ್ಞಾನ ಕೇಂದ್ರ ಬರಲಿದೆ. ಗಾಂಧಿ ಮೈದಾನದ 30 ಸೆಂಟ್ಸ್ ಜಾಗದಲ್ಲಿ ಮಹಾತ್ಮಗಾಂಧಿ ಪಾರ್ಕ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ತಿಳಿಸಿದರು

ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆಯಡಿ 5,189 ವಿದ್ಯಾರ್ಥಿಗಳಿಗೆ ಒಟ್ಟು 209.98 ಲಕ್ಷ ರೂ.ಗಳನ್ನು ನೀಡಲಾಗಿದೆ. ಜಿಲ್ಲೆಯಾದ್ಯಂತ ಮಳೆಯಿಂದ ಹಾನಿಗೊಳಗಾದ ವಿವಿಧ ರಸ್ತೆಗಳು ಮತ್ತು ಸೇತುವೆಗಳ ಪರಿಹಾರ ಕಾರ್ಯಗಳನ್ನು ನಡೆಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಎನ್‌ಡಿಆರ್‌ಎಫ್ ಯೋಜನೆಯಡಿ ಜಿಲ್ಲೆಯ 46,099 ರೈತರಿಗೆ ಈ ವರ್ಷದ ಬೆಳೆ ನಷ್ಟಕ್ಕೆ 133.26 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೊಡಗಿನ ಪದ್ಮಶ್ರೀ ಪುರಸ್ಕೃತ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಶಾಸಕ ಅಪ್ಪಚ್ಚು ರಂಜನ್, ಡಿಸಿ ಡಾ.ಬಿ.ಸಿ.ಸತೀಶ, ಎಸ್ಪಿ ಎಂ.ಎ.ಅಯ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT