ಸ್ವಾಮೀಜಿಯಿಂದ ಮೈಕ್ ಕಸಿದ ಸಿಎಂ 
ರಾಜ್ಯ

ನಾನೇನು ಆಶ್ವಾಸನೆ ಕೊಡುವ ಸಿಎಂ ಅಲ್ಲ, ಕೊಡಿ ಇಲ್ಲಿ:  ಸಿಡಿಮಿಡಿಗೊಂಡು ಸ್ವಾಮೀಜಿ ಕೈಯಿಂದ ಮೈಕ್ ಕಸಿದ ಬಸವರಾಜ ಬೊಮ್ಮಾಯಿ!

ಭರವಸೆಯನ್ನಷ್ಟೆ ಕೊಟ್ಟರೆ ಒಪ್ಪುವುದಿಲ್ಲ’ ಎಂದು ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳುತ್ತಿದ್ದಂತೆ, ಅವರ ಕೈಯಿಂದ ಮೈಕ್ ಕಸಿದುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ ಪ್ರಸಂಗ ಗುರುವಾರ ನಡೆಯಿತು.

ಬೆಂಗಳೂರು: ‘ಭರವಸೆಯನ್ನಷ್ಟೆ ಕೊಟ್ಟರೆ ಒಪ್ಪುವುದಿಲ್ಲ’ ಎಂದು ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳುತ್ತಿದ್ದಂತೆ, ಅವರ ಕೈಯಿಂದ ಮೈಕ್ ಕಸಿದುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ ಪ್ರಸಂಗ ಗುರುವಾರ ನಡೆಯಿತು.

ಗರುಡಾಚಾರ್ ಪಾಳ್ಯದಲ್ಲಿ ಇರುವ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಖಾರವಾಗಿ ಕಾಗಿನೆಲೆಯ ಈಶ್ವರಾನಂದಪುರಿ ಸ್ವಾಮೀಜಿ ಅವರು ಮಾತನಾಡಿದರು.

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ, ನೀವು ಬೆಂಗಳೂರಿನ ಪ್ರವಾಹಕ್ಕೆ ಕೇವಲ ಆಶ್ವಾಸನೆ ಕೊಡುವ ಮುಖ್ಯಮಂತ್ರಿ ಆಗಬಾರದು ಎಂದು ಹೇಳಿದರು. ಆಗ ಅಸಮಾಧಾನಗೊಂಡ ಮುಖ್ಯಮಂತ್ರಿ, ‘ಕೊಡಿ ಇಲ್ಲಿ’ ಎಂದು ಮೈಕ್ ಪಡೆದುಕೊಂಡರು.

‘ಇದು ಭರವಸೆಯಲ್ಲ. ಈಗಾಗಲೇ ಯೋಜನೆ ಸಿದ್ಧಪಡಿಸಿ ಹಣ ಕೊಟ್ಟಿದ್ದೇನೆ. ಕಾಮಗಾರಿಯೂ ನಡೆಯುತ್ತಿದೆ ಬುದ್ಧಿ. ಭರವಸೆ ನೀಡುವ ಮುಖ್ಯಮಂತ್ರಿ ನಾನಲ್ಲ. ಸಾಧ್ಯವಿದ್ದರೆ ಮಾಡುತ್ತೇನೆ ಎನ್ನುತ್ತೇನೆ, ಇಲ್ಲದಿದ್ದರೆ ಇಲ್ಲ. ನನಗೆ ಯಾರ ಭಯವೂ ಇಲ್ಲ. ನಾನು ಆ ರೀತಿಯ ಮುಖ್ಯಮಂತ್ರಿಯೂ ಅಲ್ಲ. ನನಗೆ ಆ ಪದ ಬಳಸಬೇಡಿ’ ಎಂದು ಮುಖ ಗಂಟಿಕ್ಕಿದರು.

ಮತ್ತೆ ಮೈಕ್ ಪಡೆದ ಸ್ವಾಮೀಜಿ, ‘ನಾನು ಹಾಗೆ ಹೇಳಲಿಲ್ಲ. ಪೂರ್ತಿ ಹೇಳುವಷ್ಟರಲ್ಲಿ ನೀವು ಮೈಕ್ ಪಡೆದುಕೊಂಡಿರಿ. ಮುಖ್ಯಮಂತ್ರಿಯವರ ಕಾರ್ಯವೈಖರಿಯನ್ನು ನಾನು ಗಮನಿಸಿದ್ದೇನೆ. ಹಿಂದುಳಿದ ವರ್ಗಗಳ ಮಠಗಳಿಗೆ ನೂರಾರು ಕೋಟಿ ಹಣ ಕೊಟ್ಟು ಶಾಲಾ–ಕಾಲೇಜುಗಳನ್ನು ಕಟ್ಟಲು ಸಹಕಾರ ನೀಡಿದ್ದೀರಿ. ನಿಮ್ಮನ್ನು ಆ ಗುಂಪಿಗೆ ನಾವು ಸೇರಿಸುವುದಿಲ್ಲ’ ಎಂದರು. ಆಗ ನಗುಮುಖದಿಂದ ಬೊಮ್ಮಾಯಿ ಕೈಮುಗಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT