ಸಿಎಂ ಬೊಮ್ಮಾಯಿ 
ರಾಜ್ಯ

ಕರಾವಳಿಗೆ ಬಜೆಟ್ ನಲ್ಲಿ ದೊಡ್ಡ ಯೋಜನೆಗಳು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕರಾವಳಿ ನಮ್ಮ ರಾಜ್ಯದ ಆರ್ಥಿಕ ವಲಯದಲ್ಲಿ ಪ್ರಮುಖವಾಗಿರುವಂಥ ಪ್ರದೇಶ. ಇಲ್ಲಿಯ ಚಟುವಟಿಕೆಗಳು, ಬಂದರುಗಳ ಅಭಿವೃದ್ಧಿ, ಮೂಲ ಉದ್ಯೋಗಕ್ಕೆ ಇಂಬು ಕೊಡುವ, ಪ್ರವಾಸೋದ್ಯಮವನ್ನು ವಿಸ್ತರಿಸುವ ದೊಡ್ಡ ಕಾರ್ಯಕ್ರಮಗಳು ಮನದಲ್ಲಿವೆ-ಸಿಎಂ

ಉಡುಪಿ: ಕರಾವಳಿ ನಮ್ಮ ರಾಜ್ಯದ ಆರ್ಥಿಕ ವಲಯದಲ್ಲಿ ಪ್ರಮುಖವಾಗಿರುವಂಥ ಪ್ರದೇಶ. ಇಲ್ಲಿಯ ಚಟುವಟಿಕೆಗಳು, ಬಂದರುಗಳ ಅಭಿವೃದ್ಧಿ, ಮೂಲ ಉದ್ಯೋಗಕ್ಕೆ ಇಂಬು ಕೊಡುವ, ಪ್ರವಾಸೋದ್ಯಮವನ್ನು ವಿಸ್ತರಿಸುವ ದೊಡ್ಡ ಕಾರ್ಯಕ್ರಮಗಳು ಮನದಲ್ಲಿವೆ. ಬಜೆಟ್ ಬರುವವವರೆಗೆ  ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಾರ್ಕಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪತ್ರಕರ್ತರಿಗೆ ಬೆಂಬಲ

ಉಡುಪಿ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘ ರಜತಮಹೋತ್ಸವ ಆಚರಣೆ ಮಾಡುತ್ತಿದೆ. ಉಡುಪಿ ಜಿಲ್ಲೆಯಾಗಿ 25 ವರ್ಷಗಳ ಸಂಭ್ರಮೋತ್ಸವ ಆಚರಣೆಯಾದಂತೆಯೇ ಉಡುಪಿ ಪತ್ರಕರ್ತರ ಸಂಘ ಅದೇ ವರ್ಷ ಸ್ಥಾಪನೆಯಾಗಿದ್ದು 25 ವರ್ಷಗಳು ತುಂಬಿವೆ.

ಒಂದು ಸಂಘಕ್ಕೆ 25 ವರ್ಷ ನಿರಂತರವಾಗಿ ಸಾರ್ವಜನಿಕ ವಲಯದದಲ್ಲಿ ತಮ್ಮ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕ, ನಿಷ್ಠೆಯಿಂದ ನಿಭಾಯಿಸಿ, ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿದ  ಪತ್ರಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು. ಇಡೀ ವರ್ಷ ಹಮ್ಮಿಕೊಂಡಿರುವ 25 ಕಾರ್ಯಕ್ರಮಗಳು ಯಶಸ್ವಿಯಾಗಲಿ. ಸರ್ಕಾರ ಕ್ಷೇಮನಿಧಿಯಿಂದ ಹಿಡಿದು ಇತರೆ ಎಲ್ಲಾ ಬೆಂಬಲವನ್ನು ನೀಡಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT