ರಶೀದ್ ಅಹಮದ್ ಖಾದ್ರಿ 
ರಾಜ್ಯ

ಇದು ಬಿದರಿಗರ ಕಲೆಗೆ ಸಂದ ಗೌರವ': ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಶೀದ್ ಅಹಮದ್ ಖಾದ್ರಿ

ಪದ್ಮಶ್ರೀ ಪ್ರಶಸ್ತಿ ದುಡಿಯುತ್ತಿರುವ ಕಲಾವಿದರು, ಬೀದರ್ ಜಿಲ್ಲೆಯ ಎಲ್ಲಾ ಕಲಾವಿದರಿಗೆ ಸಂದ ಗೌರವವಾಗಿದೆ ಎಂದು ಖ್ಯಾತ ಬಿದರಿ ಕಲಾವಿದ ರಶೀದ್ ಅಹಮದ್ ಖಾದ್ರಿ ಅವರು ಹೇಳಿದ್ದಾರೆ.

ಕಲಬುರಗಿ: ಪದ್ಮಶ್ರೀ ಪ್ರಶಸ್ತಿ ದುಡಿಯುತ್ತಿರುವ ಕಲಾವಿದರು, ಬೀದರ್ ಜಿಲ್ಲೆಯ ಎಲ್ಲಾ ಕಲಾವಿದರಿಗೆ ಸಂದ ಗೌರವವಾಗಿದೆ ಎಂದು ಖ್ಯಾತ ಬಿದರಿ ಕಲಾವಿದ ರಶೀದ್ ಅಹಮದ್ ಖಾದ್ರಿ(67) ಅವರು ಹೇಳಿದ್ದಾರೆ.

ಬುಧವಾರ ಸಂಜೆ ಕೇಂದ್ರ ಸರ್ಕಾರದ ಪ್ರಶಸ್ತಿಯ ಬಗ್ಗೆ ಬೀದರ್ ಡಿಸಿ ಗೋವಿಂದ್ ರೆಡ್ಡಿ ಅವರು. ರಶೀದ್ ಅಹಮದ್ ಖಾದ್ರಿ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದು, ಮಾಹಿತಿ ತಿಳಿಸಿದ ರಶೀದ್ ಅವರು ಆಶ್ಚರ್ಯಚಕಿತರಾಗಿದ್ದಾರೆ.

ಬಿದರಿ ಕಲಾವಿದರು ಮತ್ತು ಬೀದರ್ ಜಿಲ್ಲೆಗೆ ಪದ್ಮಶ್ರೀ ಪ್ರಶಸ್ತಿ ಲಭಿಸುತ್ತಿರುವುದು ಇದೇ ಮೊದಲು. ಇದು ಬಿದರಿಗರ ಕಲೆಗೆ ಸಂದ ಗೌರವವಾಗಿದೆ ಎಂದು ಹೇಳಿದ್ದಾರೆ.

ಸುಮಾರು 5-6 ವರ್ಷಗಳ ಹಿಂದೆ ಹಲವು ಬಾರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದೆ. ಆದರೆ, ಇದಕ್ಕೆ ಯಾವುದೇ ಸ್ಪಂದನೆಗಳು ಸಿಗದಿದ್ದಾಗ ಅರ್ಜಿ ಸಲ್ಲಿಸುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ. ಇದೀಗ 5 ದಶಕಗಳ ನಮ್ಮ ಶ್ರಮವನ್ನು ಗುರುತಿಸಿ, ಕೇಂದ್ರ ಸರ್ಕಾರ ನಮ್ಮ ಕಲೆಯನ್ನು ಗೌರವಿಸಿದೆ ಎಂದು ತಿಳಿಸಿದ್ದಾರೆ.

1984 ರಲ್ಲಿ ರಾಜ್ಯ ಪ್ರಶಸ್ತಿ, 1988 ರಲ್ಲಿ ರಾಷ್ಟ್ರೀಯ ಪ್ರಶಸ್ತಿ, 1996 ರಲ್ಲಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮತ್ತು 2004 ರಲ್ಲಿ ದಿ ಗ್ರೇಟ್ ಇಂಡಿಯನ್ ಅಚೀವರ್ಸ್ ಪ್ರಶಸ್ತಿಯನ್ನು ಈಗಾಗಲೇ ಪಡೆದುಕೊಂಡಿರುವ ಖಾದ್ರಿಯವರಿಗೆ ಪದ್ಮಶ್ರೀ ಪ್ರಶಸ್ತಿ ಅತ್ಯಂತ ದೊಡ್ಡ ಪ್ರಶಸ್ತಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT