ಸ್ಯಾಂಟ್ರೋ ರವಿ 
ರಾಜ್ಯ

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಬೆಂಗಳೂರು: ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಆರೋಪಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದು, ನಿನ್ನೆ ಸಂಜೆ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ವ್ಯತ್ಯಯ ಕಂಡು ಬಂದಿದೆ. ಕೂಡಲೇ ಆತನನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಶುಗರ್​ ಪ್ರಮಾಣ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ತಿಳಿದುಬಂದಿದೆ.

ನಿಯಮಿತ ಮಾತ್ರೆಗಳಿಂದ ಹೆಚ್ಚಿನ ಮಾತ್ರಗಳನ್ನು ಸೇವಿಸಿರುವ ಶಂಕೆಗಳು ಅಧಿಕಾರಿಗಳಲ್ಲಿ ಮೂಡಿದ್ದು, ಈ ಬಗ್ಗೆ ಅಧಿಕಾರಿಗಳು ವೈದ್ಯರ ಬಳಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಶುಗರ್, ಬಿಪಿ ಸೇರಿ ಹಲವು ಸಮಸ್ಯೆ ಯಿಂದ ಬಳಲುತ್ತಿರುವ ಸ್ಯಾಂಟ್ರೋ ರವಿ, ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ನಾ ಎಂಬ ಅನುಮಾನ ಮೂಡಿದೆ.

ಸ್ಯಾಂಟ್ರೋ ರವಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲು ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭದ್ರತೆಗೆ ಕೆಎಸ್ ಆರ್ ಪಿ ತುಕಡಿ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅತ್ಯಾಚಾರ, ವೇಶ್ಯಾವಾಟಿಕೆ, ವಂಚನೆ, ಜಾತಿ ನಿಂದನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಮಂಜುನಾಥ್ ಕೆ‌.ಎಸ್.ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎರಡನೇ ಪತ್ನಿ ನೀಡಿರುವ ದೂರಿನ ಅನ್ವಯ ಜ. 2 ರಂದು ಪ್ರಕರಣ ದಾಖಲಾಗಿತ್ತು.

ಪತ್ನಿಯ ವಿರುದ್ಧ ಸುಳ್ಳು ಪ್ರಕರಣ, ಮಾನಸಿಕ ಹಾಗೂ ದೈಹಿಕ‌ ಕಿರುಕುಳ ಪ್ರಕರಣದಲ್ಲಿ ಬಂಧಿತನಾಗಿರುವ ಸ್ಯಾಂಟ್ರೋ ರವಿ ಸದ್ಯ ಸಿಐಡಿ ವಶದಲ್ಲಿದ್ದಾನೆ.  ಜನವರಿ 30ಕ್ಕೆ ಕಸ್ಟಡಿ ಅವಧಿ ಅಂತ್ಯವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT