ಅಮಿತ್ ಶಾ ಸ್ವಾಗತಿಸಿದ ಸಿಎಂ ಬೊಮ್ಮಾಯಿ ಮತ್ತಿತರರು 
ರಾಜ್ಯ

ಹುಬ್ಬಳ್ಳಿಗೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ; ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದಲ್ಲು, ಉಕ್ಕು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ನಂತರ ವಿಮಾನ ನಿಲ್ದಾಣದಿಂದ ಡೆನಿಸನ್ಸ್ ಹೋಟೆಲ್ ಗೆ ಅಮಿತ್ ಶಾ ತೆರಳಿದರು. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿರುವ ಅಮಿತ್ ಶಾ, ಶನಿವಾರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಹುಬ್ಬಳ್ಳಿಗೆ ಆಗಮಿಸಿರುವ ಅಮಿತ್ ಶಾ, ಶನಿವಾರ ರೋಡ್ ಶೋ ನಡೆಸಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿ.ವಿ.ಭೂಮರಡ್ಡಿ ಕಾಲೇಜಿನ 75ನೇ ವರ್ಷದ (ಪ್ಲಾಟಿನಂ ಮಹೋತ್ಸವ) ಸಮಾರಂಭದಲ್ಲಿ ಭಾಗವಹಿಸಲಿರುವ ಅಮಿತ್ ಶಾ, ಧಾರವಾಡದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಶಾಖೆಯ ಭೂಮಿ ಪೂಜೆಯನ್ನು ಅವರು ನೆರವೇರಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!