ಅಮಿತ್ ಶಾ ಸ್ವಾಗತಿಸಿದ ಸಿಎಂ ಬೊಮ್ಮಾಯಿ ಮತ್ತಿತರರು 
ರಾಜ್ಯ

ಹುಬ್ಬಳ್ಳಿಗೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ; ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದಲ್ಲು, ಉಕ್ಕು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ನಂತರ ವಿಮಾನ ನಿಲ್ದಾಣದಿಂದ ಡೆನಿಸನ್ಸ್ ಹೋಟೆಲ್ ಗೆ ಅಮಿತ್ ಶಾ ತೆರಳಿದರು. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿರುವ ಅಮಿತ್ ಶಾ, ಶನಿವಾರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಹುಬ್ಬಳ್ಳಿಗೆ ಆಗಮಿಸಿರುವ ಅಮಿತ್ ಶಾ, ಶನಿವಾರ ರೋಡ್ ಶೋ ನಡೆಸಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿ.ವಿ.ಭೂಮರಡ್ಡಿ ಕಾಲೇಜಿನ 75ನೇ ವರ್ಷದ (ಪ್ಲಾಟಿನಂ ಮಹೋತ್ಸವ) ಸಮಾರಂಭದಲ್ಲಿ ಭಾಗವಹಿಸಲಿರುವ ಅಮಿತ್ ಶಾ, ಧಾರವಾಡದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಶಾಖೆಯ ಭೂಮಿ ಪೂಜೆಯನ್ನು ಅವರು ನೆರವೇರಿಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT