ವಶಕ್ಕೆ ಪಡೆಯಲಾಗಿರುವ ಸರೀಸೃಪಗಳು. 
ರಾಜ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18 ವಿದೇಶಿ ಪ್ರಾಣಿಗಳು ವಶ: ಮೂವರ ಬಂಧನ

ಬ್ಯಾಂಕಾಕ್'ನಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರ ಮೇಲೆ ದಾಳಿ ನಡೆಸಿ ಬಂಧಿಸಿರುವ ವಾಣಿಜ್ಯ ತೆರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳು, ಅವರಿಂದ 18 ವಿದೇಶಿ ಪ್ರಾಣಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬ್ಯಾಂಕಾಕ್'ನಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರ ಮೇಲೆ ದಾಳಿ ನಡೆಸಿ ಬಂಧಿಸಿರುವ ವಾಣಿಜ್ಯ ತೆರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳು, ಅವರಿಂದ 18 ವಿದೇಶಿ ಪ್ರಾಣಿಗಳನ್ನು ವಶಪಡಿಸಿಕೊಂಡಿದ್ದಾರೆ.

ಜ.22ರಂದು ಬ್ಯಾಂಕಾಕ್ ನಿಂದ ಆಗಮಿಸಿದ ವಿಮಾನದಲ್ಲಿ ಈ ಪ್ರಾಣಿಗಳನ್ನು ಅಕ್ರವಾಗಿ ತರಲಾಗಿತ್ತು. ಈ ವಿಮಾನದಲ್ಲಿ ಪ್ರಯಾಣಿಸಿದ್ದ ಓಱ್ವ ಮಹಿಲೆ ಸೇರಿ ಮೂವರು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು ಅವರ ಬ್ಯಾಗುಗಳನ್ನು ಪರೀಕ್ಷಿಸಿ 18 ಪ್ರಾಣಿಗಳನ್ನು ವಶಪಡಿಸಿಕೊಂಡಿದ್ದಾರೆ.

ಇವುಗಳಲ್ಲಿ 14 ಸರೀಸೃಪಗಳು ಮತ್ತು 4 ಸಸ್ತನಿಗಳು ಸೇರಿವೆ. ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ನಂತರ ವಿವಿಧೆಡೆ 48 ವಿವಿಧ ತಳಿಯ 139 ಪ್ರಾಣಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಪಡಿಸಿಕೊಂಡ ಪ್ರಾಣಿಗಳಲ್ಲಿ ಹಳದಿ ಮತ್ತು ಹಸಿರು ಆನಕೊಂಡ, ಹಳದಿ ತಲೆಯ ಅಮೆಜಾನ್ ಗಿಳಿ, ನೈಲ್ ಮಾನಿಟರ್, ಕೆಂಪು ಕಾಲಿನ ಆಮೆ, ಗೋಸುಂಬೆ, ಹೆಬ್ಬಾವು, ಅಲಿಗೇಟರ್, ಯಾಕಿ ಕೋತಿ, ರಕೂನ್ ನಾಯಿಗಳು ಸೇರಿವೆ. ಇವುಗಳನ್ನು ಸದ್ಯದ ಮಟ್ಟಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬಿಡಲಾಗಿದೆ.

ಭಾನುವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಮೂವರು ಹಾವು ಮತ್ತು ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿತ್ತು.

ಇದರಂತೆ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳ ನೆರವಿನೊಂದಿಗೆ, ಹದ್ದಿನ ಕಣ್ಣಿಟ್ಟು, ಸರಿಸೃಪ ಹಾಗೂ ಪ್ರಾಣಿಗಳ ಅಕ್ರಮ ಸಾಗಾಟ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದರು.

ಆರೋಪಿಗಳು ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸರಿಸೃಪ ಹಾಗೂ ಪ್ರಾಣಿ, ಪಕ್ಷಿಗಳನ್ನು ಬೆಂಗಳೂರು ನಗರಕ್ಕೆ ತಂದು ದುಬಾರಿ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುವ ಉದ್ದೇಶವನ್ನು ಆರೋಪಿಗಳು ಹೊಂದಿರಬಹುದು ಎಂದು ಶಂಕಿಸಲಾಗಿದೆ.

1972ರ ವನ್ಯಜೀವಿ ರಕ್ಷಣಾ ಕಾಯ್ದೆಯ ಪ್ರಕಾರ ಅನುಮತಿ ಇಲ್ಲದೆ ಕಾಡು ಪ್ರಾಣಿಗಳ ಆಮದು ಮಾಡಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT