ಸಂಗ್ರಹ ಚಿತ್ರ 
ರಾಜ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 97.5ರಷ್ಟು ಏರಿಕೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹಿಂದಿನ ಹಣಕಾಸು ವರ್ಷದ ಅವಧಿಗೆ ಹೋಲಿಸಿದರೆ ಏಪ್ರಿಲ್‌ನಿಂದ ಡಿಸೆಂಬರ್ 2022 ರವರೆಗೆ ಪ್ರಯಾಣಿಕರ ದಟ್ಟಣೆಯಲ್ಲಿ ಶೇಕಡಾ 97.5 ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಿಳಿಸಿದೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹಿಂದಿನ ಹಣಕಾಸು ವರ್ಷದ ಅವಧಿಗೆ ಹೋಲಿಸಿದರೆ ಏಪ್ರಿಲ್‌ನಿಂದ ಡಿಸೆಂಬರ್ 2022 ರವರೆಗೆ ಪ್ರಯಾಣಿಕರ ದಟ್ಟಣೆಯಲ್ಲಿ ಶೇಕಡಾ 97.5 ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಿಳಿಸಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ 2022ರ ಹಣಕಾಸು ವರ್ಷದ ಮುಕ್ಕಾಲು ಭಾಗದ ಪ್ರಯಾಣಿಕರ ದಟ್ಟಣೆ ಕುರಿತ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ವರದಿಯಲ್ಲಿ ಈ ಹಣಕಾಸು ವರ್ಷದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಭಾರೀ ಏರಿಕೆಯಾಗಿರುವುದು ಕಂಡು ಬಂದಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ 7.12 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದರು. ಆದರೆ, ಈ ವರ್ಷ 27.53 ಲಕ್ಷ ಪ್ರಯಾಣಿಕರು ಪ್ರಯಾಣಿಸಿರುವುದು ಕಂಡು ಬಂದಿದೆ.

ಡಿಸೆಂಬರ್ ಹಬ್ಬಗಳ ತಿಂಗಳಾಗಿದ್ದು, ಈ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಇದು 2021 ರ ಡಿಸೆಂಬರ್'ನ ಅಂಕಿ ಅಂಶಕ್ಕಿಂತ ದ್ವಿಗುಣವಾಗಿದ್ದು, ಅಂಕಿಅಂಶಗಳ ಪ್ರಕಾರ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2.27 ಕೋಟಿ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಸಿರುವುದು ತಿಳಿದುಬಂದಿದೆ. 2021-2022 ರಲ್ಲಿ ಕೇವಲ 1.15 ಕೋಟಿ ಮಂದಿ ಪ್ರಯಾಣಿಸಿರುವುದು ಕಂಡು ಬಂದಿದೆ.

ಆದರೆ ಡಿಸೆಂಬರ್ 2021 ಕ್ಕೆ ಹೋಲಿಸಿದರೆ ಡಿಸೆಂಬರ್ 2022 ರಲ್ಲಿ ರಾಜ್ಯ ಇತರೆ ಎರಡು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತ ಕಂಡು ಬಂದಿದೆ. ಕಲಬುರಗಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿರುವುದು ಕಂಡು ಬಂದಿದೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುಮಾರು 2,000 ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 9,000ದಷ್ಟು ಕಡಿಮೆಯಾಗಿರುವುದು ಕಂಡು ಬಂದಿದೆ.

ವಿಮಾನಯಾನ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ಅವರು ಮಾತನಾಡಿ, ಲಾಕ್ಡೌನ್ ತೆಗೆದುಹಾಕಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಅವರು ಮಾತನಾಡಿ, ದೆಹಲಿ, ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಸ್ಪೈಸ್‌ಜೆಟ್‌ ಕಾರ್ಯಾಚರಣೆಯನ್ನು ನಿಲ್ಲಿಸಿರುವುದು ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT